12:40 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್. ಜನಾರ್ದನ್ ನೇಮಕ

07/03/2024, 23:53

ಬೆಳ್ತಂಗಡಿ(reporterkarnataka.com): ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ದನ್ ನೇಮಕಗೊಂಡಿದ್ದಾರೆ.
ಅವರು ರುಡ್ ಸೆಟ್ ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ 560ಕ್ಕೂ ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು. ಅರ್ ಸೆಟಿಗಳು ಪ್ರತಿವರ್ಷ 4 ಲಕ್ಷಕ್ಕೂ ಅಧಿಕ ನಿರುದ್ಯೋಗಿ ಯುವ ಜನತೆಗೆ ತರಬೇತಿ ನೀಡುತ್ತಿದ್ದು ಇದರಲ್ಲಿ ಪ್ರತಿ ವರ್ಷ 3 ಲಕ್ಷಕ್ಕೂ ಅಧಿಕ ಮಂದಿ ಸ್ವ ಉದ್ಯೋಗಿಗಳಾಗಿ ಸ್ವಂತ ಜೀವನ ನಡೆಸುತ್ತಾರೆ. ಸಿಂಡಿಕೇಟ್ ಬ್ಯಾಂಕ್ ನಲ್ಲಿ ಸತತ 35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಅವರು ಬಳಿಕ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಅಲ್ಲದೆ ಪ್ರಸ್ತುತ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇದೀಗ ಕೊಡಗು ವಿವಿ ಸಿಂಡಿಕೇಟ್ ಸದಸ್ಯರಾಗಿ ದೊಡ್ಡ ಗೌರವಕ್ಕೆ ಪಾತ್ರರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು