12:03 PM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಈ ವಾರಂತ್ಯದಲ್ಲೂ ಇದೆ ವೀಕೆಂಡ್ ಕರ್ಫ್ಯೂ; ದ.ಕ. ಜಿಲ್ಲೆಯಲ್ಲಿ ಶಾಲೆ ಕಾಲೇಜು ಆರಂಭ ಮತ್ತೆ ವಿಳಂಬ ?

12/08/2021, 08:48

ಮಂಗಳೂರು(reporterkarnataka.com); ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ಪರೀಕ್ಷೆಗೆ ತೆರಳುವವರು ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಬಹುದು ಎಂದು ಅವರು ತಿಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಶಾಲೆ- ಕಾಲೇಜು ಆರಂಭ ವಿಳಂಬವಾಗುವ ಸಾಧ್ಯತೆ. ಈಗಾಗಲೇ ಮುಖ್ಯಮಂತ್ರಿಯವರು ಶಾಲೆ ಕಾಲೇಜು ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಉಳಿದ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಆರಂಭವಾದರೂ ದ.ಕ.  ಸೇರಿದಂತೆ  ಕೋವಿಡ್ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ದ.ಕ. ಜಿಲ್ಲಾಸ್ಪತ್ರೆಯಾದ ವೆನ್‌ಲಾಕ್‌ನಲ್ಲಿ 32 ಬೆಡ್‌ಗಳ ಹೈಟೆಕ್ ಐಸಿಯು ಸಿದ್ಧಗೊಂಡಿದ್ದು, ಜಿಲ್ಲೆಗೆ ಗುರುವಾರ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಆ.15ರಿಂದ ಮತ್ತೆ ಲಾಕ್‌ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವುದು ನಿಜ. ಆದರೆ ಅತ್ಯಂತ ಸುಸಜ್ಜಿತ ಆಧುನಿಕ ಆಸ್ಪತ್ರೆಗಳು, ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವ ಕಾಸರಗೋಡು ಸೇರಿದಂತೆ ಕೇರಳ ರಾಜ್ಯದ ಜತೆ ದ.ಕ. ಜಿಲ್ಲೆ ಗಡಿ ಹಂಚಿಕೊಂಡಿರುವುದರಿಂದ ಸಹಜವಾಗಿ ಪಾಸಿಟಿವಿಟಿ ದರದಲ್ಲಿ ಹೆಚ್ಚಳ ಕಂಡುಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಪ್ರತಿನಿತ್ಯ ಕೋವಿಡ್ ತಪಾಸಣಾ ಸಂಖ್ಯೆಯೂ ಹೆಚ್ಚುತ್ತಿದೆ. ನಿನ್ನೆ ಒಂದು ದಿನದಲ್ಲಿ 9900 ಮಂದಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ  ಮತ್ತೆ ಲಾಕ್‌ಡೌನ್ ಮಾಡುವಂತಹ ಪರಿಸ್ಥಿತಿ ಇಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು