1:49 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕೇವಲ ಪಠ್ಯ ಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ: ಮಜಿ ಸರಕಾರಿ ಪ್ರಾಥಮಿಕ ಶಾಲೆ ಬಾಲವನ ಉದ್ಘಾಟಿಸಿ ಸುಧೀರ್ ಸಾಗರ್

07/03/2024, 23:57

ಕಲ್ಲಡ್ಕ(reporterkarnataka.com): ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ.ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ ಕೊಂಡಾಗ ಮಾತ್ರ ಉತ್ತಮವಾದ ಕಲಿಕೆಯನ್ನು ಹೊಂದಲು ಸಾಧ್ಯ ಎಂದು ಟಾಟಾ ಕಂಪನಿಯ ಆಡಳಿತ ವಿಭಾಗದ ಉಪಾಧ್ಯಕ್ಷ ಸುಧೀರ್ ಸಾಗರ್ ಹೇಳಿದರು.


ಅವರು ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಗೆ ತಮ್ಮ ವತಿಯಿಂದ ಬಾಲವನವನ್ನು ನೀಡಿ ಉದ್ಘಾಟಿಸಿದ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ದತ್ತು ಸಂಸ್ಥೆಯ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಅವರ ಸಹೋದರ ಶ್ರೀದೇವಿ ಕನ್ಸ್ಟ್ರಕ್ಷನ್ ಮಾಲಕರಾದ ಸಂದೀಪ್ ಕುಮಾರ್ ಶೆಟ್ಟಿ ಅರೆಬೆಟ್ಟು, ಕರ್ಕೆರ ಎಸ್. ಎಸ್. ಇಂಡಸ್ಟ್ರೀಸ್ ಬಂಟ್ವಾಳ ಇದರ ಪ್ರೇಮನಾಥ ಕೆ., ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಶಾಲಾ ಶಿಕ್ಷಕ ವೃಂದ ಹಾಗೂ ಮಕ್ಕಳು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟ ಆಗ್ನೆಸ್ ಮಂಡೋನ್ಸಾ ಸ್ವಾಗತಿಸಿದರು. ಸಹ ಶಿಕ್ಷಕಿ ಸಂಗೀತ ಶರ್ಮ ಪಿ. ಜಿ. ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು