9:15 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೇವಲ ಪಠ್ಯ ಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ: ಮಜಿ ಸರಕಾರಿ ಪ್ರಾಥಮಿಕ ಶಾಲೆ ಬಾಲವನ ಉದ್ಘಾಟಿಸಿ ಸುಧೀರ್ ಸಾಗರ್

07/03/2024, 23:57

ಕಲ್ಲಡ್ಕ(reporterkarnataka.com): ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ.ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ ಕೊಂಡಾಗ ಮಾತ್ರ ಉತ್ತಮವಾದ ಕಲಿಕೆಯನ್ನು ಹೊಂದಲು ಸಾಧ್ಯ ಎಂದು ಟಾಟಾ ಕಂಪನಿಯ ಆಡಳಿತ ವಿಭಾಗದ ಉಪಾಧ್ಯಕ್ಷ ಸುಧೀರ್ ಸಾಗರ್ ಹೇಳಿದರು.


ಅವರು ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಗೆ ತಮ್ಮ ವತಿಯಿಂದ ಬಾಲವನವನ್ನು ನೀಡಿ ಉದ್ಘಾಟಿಸಿದ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ದತ್ತು ಸಂಸ್ಥೆಯ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಅವರ ಸಹೋದರ ಶ್ರೀದೇವಿ ಕನ್ಸ್ಟ್ರಕ್ಷನ್ ಮಾಲಕರಾದ ಸಂದೀಪ್ ಕುಮಾರ್ ಶೆಟ್ಟಿ ಅರೆಬೆಟ್ಟು, ಕರ್ಕೆರ ಎಸ್. ಎಸ್. ಇಂಡಸ್ಟ್ರೀಸ್ ಬಂಟ್ವಾಳ ಇದರ ಪ್ರೇಮನಾಥ ಕೆ., ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಶಾಲಾ ಶಿಕ್ಷಕ ವೃಂದ ಹಾಗೂ ಮಕ್ಕಳು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟ ಆಗ್ನೆಸ್ ಮಂಡೋನ್ಸಾ ಸ್ವಾಗತಿಸಿದರು. ಸಹ ಶಿಕ್ಷಕಿ ಸಂಗೀತ ಶರ್ಮ ಪಿ. ಜಿ. ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು