4:10 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ 550 ಕೋಟಿ ರೂ.ಅನುದಾನ: ಶಾಸಕ ಡಾ. ಎನ್.ಟಿ. ಶ್ರೀನಿವಾಸ್

08/03/2024, 20:01

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ಎಲ್ಲಾ ಇಲಾಖೆಗಳನ್ನೊಳಗೊಂಡಂತೆ, ಕ್ಷೇತ್ರಕ್ಕೆ 550 ಕೋಟಿ ರೂ. ಅನುದಾನ ತಂದಿರುವುದಾಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಹೇಳಿದರು.


ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಎಲ್ಲಾ ಇಲಾಖೆಗಳ ತಾಲೂಕು ಪ್ರಗತಿ ಪರಿಶೀಲನಾ(ಕೆಡಿಪಿ) ಸಭೆಯಲ್ಲಿ ಅವರು ಮಾತನಾಡಿದರು.
ಕೃಷಿ ಇಲಾಖಾಧಿಕಾರಿ ಸುನಿಲ್ ಕುಮಾರ್ ಮಾತನಾಡಿ, ಕ್ಷೇತ್ರದ ರೈತರಿಗೆ ಬರ ಪರಿಹಾರದ ಅನುದಾನ ಮಂಜೂರಾಗಿರುವುದಾಗಿ ಸಭೆಗೆ ತಿಳಿಸಿದರು.
ಶಾಸಕರು ಅಧಿಕಾರಿಗಳನ್ನುದ್ಧೇಶಿಸಿ ಮಾತನಾಡಿ, ಕ್ಷೇತ್ರದಲ್ಲೆಡೆ ಕುಡಿಯುವ ನೀರಿನ ಸಮಸ್ಯೆ. ಹಾಗೂ ಧನ ಕರುಗಳಿಗೆ ಮೇವಿನ ಸಮಸ್ಯೆ ಇದ್ದಲ್ಲಿ, ಕೂಡಲೇ ನಮ್ಮ ಗಮನಕ್ಕೆ ತರುವ ಮೂಲಕ ಸಮಸ್ಯೆ ಬಿಗಡಾಯಿಸದಂತೆ ಜಾಗ್ರತೆ ವಹಿಸಬೇಕೆಂದು ಸೂಚಿಸಿದರು.
ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗಾಗಿ, ಆಯಾ ಗ್ರಾಮ ಪಂಚಾಯ್ತಿಗಳಲ್ಲಿ ಹಾಲಿ ಇರುವಂತಹ ಬೋರ್ ವೆಲ್ ಗಳು ಕೆಟ್ಟಲ್ಲಿ ಪರ್ಯಾಯವಾಗಿ ಖಾಸಗಿ ಬೋರ್ ಮಾಲಿಕರೊಂದಿಗೆ ಒಪ್ಪಂದ ಮಾಡಿಕೊಂಡು ಕನಿಷ್ಠ 3-6 ತಿಂಗಳುಗಳ ವರಿಗೆ ತಿಂಗಳೊಂದಕ್ಕೆ 18 ಸಾವಿರ ಹಣ ಬಾಡಿಗೆ ಕೊಟ್ಟು, ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವಂತೆ ಕ್ರಮ ಕೈಗೊಳ್ಳಬೇಕಿದೆ ಎಂದು ಪಿಡಿಒಗಳಿಗೆ ಸೂಚಿಸಿದರು. ರಾಜ್ಯ ಸರ್ಕಾರವು ಜನರ ಹಿತಕ್ಕಾಗಿ ಎಲ್ಲಾ ಗ್ಯಾರೆಂಟಿಗಳನ್ನು, ಸಮರ್ಪಕವಾಗಿ ಜಾರಿ ಮಾಡುವುದರ ಜೊತೆಗೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಒಲವು ತೋರಿದೆ. ಅದಕ್ಕಾಗಿ ನಮ್ಮ ಕೂಡ್ಲಿಗಿ ಕ್ಷೇತ್ರಕ್ಕೆ ಸರ್ಕಾರ ರಚನೆಯಾಗಿ ವರ್ಷ ತುಂಬು ದೊರೊಳಗಾಗಿ, ಎಲ್ಲಾ ಇಲಾಖೆಗಳಿಗೆ ಒಳಗೊಂಡಂತೆ 550 ಕೋಟಿ ರೂ. ಅನುದಾನ ನೀಡಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಬರ ಪೀಡಿತ ಹಣೆ ಪಟ್ಟಿಯಿಂದ ಕೂಡ್ಲಿಗಿ ಕ್ಷೇತ್ರವನ್ನು ತೆಗೆಯಲು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ತಾವು ಕೂಡ ಹಗಲಿರುಳು ಶ್ರಮಿಸುವುದರೊಂದಿಗೆ, ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿರುವುದಾಗಿ ಶಾಸಕ ಡಾ. ಶ್ರೀನಿವಾಸ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು