1:46 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ನಂಜನಗೂಡು: ಅಸ್ಪೃಶ್ಯತೆ ಅಳಿಯಲಿ ಮನುಷ್ಯತ್ವ ಉಳಿಯಲಿ: ಮಾರ್ಚ್ 10 ರಂದು ಮೈಸೂರಿನಲ್ಲಿ ವಿಚಾರ ಸಂಕಿರಣ

09/03/2024, 14:39

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜಾತಿ ವಿನಾಶ ಮತ್ತು ಸರ್ವ ಧರ್ಮ ಸಮನ್ವಯತೆ ಸಾರಿದ ಮಹಾನ್ ಮಾನವತಾವಾದಿಗಳಾದ ವಿಶ್ವಗುರು ಕ್ರಾಂತಿಕಾರಿ ಬಸವಣ್ಣ, ಸಂವಿಧಾನ ಶಿಲ್ಪಿ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್, ವಿಶ್ವಮಾನವ ಕುವೆಂಪು ಅವರ ಆಶಯಗಳನ್ನೊಳಗೊಂಡ ಅಸ್ಪೃಶ್ಯತೆ ಅಳಿಯಲಿ ಮನುಷ್ಯತ್ವ ಉಳಿಯಲಿ ಕುರಿತು ವಿಚಾರ ಸಂಕಿರಣವನ್ನು ಮಾರ್ಚ್ 10ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ನಗರದ ಟೌನ್ ಹಾಲಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ತಾಲೂಕು ಸಂಘಟನಾ ಸಂಯೋಜಕರಾದ ಕೃಷ್ಣಮೂರ್ತಿ ಕಂದೇಗಾಲ ಹಾಗೂ ಪುಟ್ಟಬುದ್ದಿ ಮಲ್ಕುಂಡಿ ತಿಳಿಸಿದರು.
ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.


ದಲಿತ ಸಂಘರ್ಷ ಸಮಿತಿ ಮೈಸೂರು ಜಿಲ್ಲಾ ಶಾಖೆ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಆದ ಎಚ್ ಸಿ ಮಹದೇವಪ್ಪನವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳು ಹಾಗೂ ಆಶಯ ಭಾಷಣಕಾರರಾಗಿ ಅಂಬೇಡ್ಕರ್ ವಾದಿಗಳು ಹಾಗೂ ಅಹಿಂದ ನಾಯಕರು ಆದ ಸಚಿವ ಸತೀಶ್ ಜಾರಕಿಹೊಳಿ ಅವರು ಹಾಗೂ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಡಿ. ತಿಮ್ಮಯ್ಯ, ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್. ಸಿ. ಬಸವರಾಜ್ , ಬಸವಣ್ಣ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ರಾಜ್ಯ ದಸಂಸ ಮುಖಂಡರಾದ ದೇವಗಳ್ಳಿ ಸೋಮಶೇಖರ್ ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಸಂಸ ರಾಜ್ಯ ಸಂಸ್ಥಾಪಕ ಸಂಯೋಜಕರಾದ ವಿ ನಾಗರಾಜರವರು ವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿ ಅಂದಿನ ಕಾರ್ಯಕ್ರಮಕ್ಕೆ ನಂಜನಗೂಡು ತಾಲೂಕಿನಿಂದ ನೂರಾರು ಕಾರ್ಯಕರ್ತ ಮುಖಂಡರು ಭಾಗವಹಿಸಲಿದ್ದಾರೆ ಎಂದು ಇದೇ ಸಂದರ್ಭ ತಿಳಿಸಿದರು.
ಗೋಷ್ಠಿಯಲ್ಲಿ ದಸಂಸ ತಾಲೂಕು ಸಂಯೋಜಕರಾದ ಕುಮಾರ್ ಕಳಲೆ, ಸೋಮಣ್ಣ ಬಿಳಿಗೆರೆ, ದಿವಾಕರ್ ಕಂದೇಗಾಲ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು