12:50 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಹಾ ಶಿವರಾತ್ರಿ; ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಹಾಗೂ ಶ್ರೀ ಸೋಮೇಶ್ವರ ಸ್ವಾಮಿ ದೇಗುಲದಲ್ಲಿ ಸಂಭ್ರಮದ ಆಚರಣೆ

09/03/2024, 20:55

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಹಾಗೂ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆಯು ಸಡಗರ ಸಂಭ್ರಮದಿಂದ ನೆರವೇರಿತು.


ಹಿಂದುಗಳ ಪವಿತ್ರ ಹಬ್ಬ ಮಹಾಶಿವರಾತ್ರಿ ಪ್ರಯುಕ್ತ ದೇವಾಲಯವನ್ನು ಬಣ್ಣ ಬಣ್ಣದ ಹೂವು ಮತ್ತು ದೀಪಗಳಿಂದ ಅಲಂಕರಿಸಲಾಗಿತ್ತು. ಹೂಗಳಿಂದ ಅಲಂಕರಿಸಲಾದ ಲಿಂಗ ರೂಪಿ ಶ್ರೀ ಸೋಮೇಶ್ವರ ಸ್ವಾಮಿ ಹಾಗೂ ಶ್ರೀ ಪಾರ್ವತಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕಳಲೆಯೂ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆದು ತಮ್ಮ ಭಕ್ತಿ ನಮನ ಸಲ್ಲಿಸಿದರು.
ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ನೀಡಲಾಯಿತು.
ದೇವಾಲಯದ ಪಾರುಪತ್ತೆಗಾರ ಜಯರಾಮ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿ
ಕಳಲೆಯ ಪುರಾತನ ಸೋಮೇಶ್ವರ ದೇವಾಲಯವು ಶಿಥಿಲಗೊಂಡಿದ್ದು ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದರ ಉಳಿವಿಗೆ ಮುಂದಾಗಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು