7:54 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಸಾಸಲವಾಡ: ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಇಷ್ಟಲಿಂಗ ಪೂಜೆ

10/03/2024, 19:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಾಸಲವಾಡ ಗ್ರಾಮದಲ್ಲಿ ಮಾ8ರ ಶಿವರಾತ್ರಿ ಹಬ್ಬದಂದು, ಜಂಗಮ ಸಮುದಾಯದ ಬಿಜೆಪಿ ಮುಖಂಡರಾದ ಎಂ.ಎಂ. ಚಂದ್ರಶೇಖರಯ್ಯ ಅವರ ಸ್ವಗೃಹದಲ್ಲಿ ಮನೆಯ ಸದಸ್ಯರೆಲ್ಲರೊಡಗೂಡಿ, ಶಿವರಾತ್ರಿ ಹಬ್ಬದ ಪ್ರಯುಕ್ತ ಇಷ್ಟ ಲಿಂಗಪೂಜೆ ನೆರವೇರಿಸುವ ಮೂಲಕ ಹಾಲಿ ಪ್ರಧಾನ ಮಂತ್ರಿಗಳಾಗಿರುವ ನರೇಂದ್ರ ಮೋದಿಯವರು, ಮತ್ತೊಮ್ಮೆ ಪ್ರಧಾನ ಮಂತ್ರಿಗಳಾಗಲೆಂದು ಶಿವನಲ್ಲಿ ಪ್ರಾರ್ಥಿಸಿದ್ದಾರೆ.

ಸಾಸಲವಾಡ ವಾಸಿ ಜಂಗಮ ಸಮುದಾಯದ ಯುವ ಮುಖಂಡರು ಹಾಗೂ ಬಿಜೆಪಿಯ ಮುಖಂಡರಾದ ಚಂದ್ರಶೇಖ ಅವರು ದಶಕಗಳಿಂದಲೂ ಬಿಜೆಪಿ ಪಕ್ಷದ ಮುಖಂಡತ್ವ ನಿರ್ವಹಿಸುತ್ತಿದ್ದು, ಅವರು ಪಕ್ಕಾ ಮೋದಿಯವರ ಅಭಿಮಾನಿಗಳಾಗಿದ್ದಾರೆ. “ನಮ್ಮ ಕುಟುಂಬ ಮೋದಿ ಕುಟುಂಬ” ಗ್ರೂಪ್ ನಲ್ಲಿ ಪ್ರಾರಂಭದಿಂದಲೂ ತುಂಬಾ ಚಟುವಟಿಯಿಳ್ಳವರಾಗಿದ್ದಾರೆ, ಅವರು ತಮ್ಮ ಸ್ವಗೃಹದಲ್ಲಿ ತಮ್ಮ ಮನೆಯ ಸರ್ವ ಸದಸ್ಯರೊಡಗೂಡಿ. ಶಿವರಾತ್ರಿ ಹಬ್ಬದ ಪ್ರಯುಕ್ತ ಧಾರ್ಮಿಕ ವಿದಿವಿಧಾನದಂತೆ ಶಿವ ಪೂಜೆ ನೆರವೇರಿಸಿದ್ದಾರೆ ಮತ್ತು ಮುಂಬರುವ ಚುನಾವಣೆಯಲ್ಲಿ. ಬಿಜೆಪಿ ಅತ್ಯಧಿಕ ಸಂಖ್ಯೆಗಳ ಸ್ಥಾನಗಳಲ್ಲಿ ಜಯಗಳಿಸಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು, ಹಾಗೂ ಹಾಲಿ ಪ್ರಧ‍ಾನಿ ನರೇಂದ್ರ ಮೋದಿಯರು. ಮತ್ತೆ ಪ್ರಧಾನ ಮಂತ್ರಿಗಳಾಗಿ ಆಯ್ಕೆಯಾಗಬೇಕೆಂಬ, ತಮ್ಮ ಮಹಾದಾಸೆಗಳನ್ನು ಈಡೇರಿಸುವಂತೆ ಸಂಕಲ್ಪ ಮಾಡಿ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು