8:47 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ

10/03/2024, 21:46

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಸ್ವಯಂಸೇವಕರಿಗೆ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾಯಿತು.


‘ಯು ಮ್ಯಾಟರ್ ‘ ಸಮಾಲೋಚನೆ ಹಾಗೂ ತರಬೇತಿ ಸಂಸ್ಥೆಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಲುಜಿನ ಮಿರಾಂಡ (ನಿರ್ದೇಶಕರು ಯು ಮ್ಯಾಟರ್), ಪ್ರೆಸಿಲ್ಲ ಡಿಸಿಲ್ವಾ, (ಪಾರುಪಾತ್ಯಾಗರಾರು ಯು ಮ್ಯಾಟರ್), ಡಾ. ಮೀನಾ ಲೋಬೊ, (ಪಾರುಪಾತ್ಯಾಗರಾರು ಯು ಮ್ಯಾಟರ್),ಸಿಸ್ಟರ್.ಡಾ.ಲತಾ ಫೆರ್ನಾಂಡಿಸ್ ಎ.ಸಿ. (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜು, ಮೊಡಂಕಾಪು), ವಿಜೇತಾ (ರಾಷ್ಟೀಯಸೇವಾ ಯೋಜನಾಧಿಕಾರಿ), ಸುಚಿಕಾ (ಸಂಯೋಜಕರು ಯೂತ್ ರೆಡ್ ಕ್ರಾಸ್) ಉಪಸ್ಥಿತರಿದ್ದರು.
ಡಾ. ಮೀನಾ ಲೋಬೊ ಸ್ವಯಂ ಸೇವಕರಿಗೆ ಜೀವನದಲ್ಲಿ ಗುರಿ ಮುಖ್ಯ. ಗುರಿಯೊಂದಿಗೆ ನಡೆದಾಗ ಮಾತ್ರ ನಾವು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂಬ ಮಾಹಿತಿ ನೀಡಿದರು.
ಮುಂದಿನ ಕಾರ್ಯಕ್ರಮವನ್ನು ಪ್ರೆಸಿಲ್ಲ ಡಿಸಿಲ್ವಾ ನಡೆಸಿಕೊಟ್ಟರು. ಸಮಾಜದೊಂದಿಗಿನ ನಮ್ಮ ಸಂಬಂಧ ಬಹಳ ಅಗತ್ಯ. ಮತೋರ್ವ ಸಂಪನ್ಮೂಲ ವ್ಯಕ್ತಿ ಸ್ವಪ್ರೀತಿ ಎಂಬ ವಿಷಯದ ಬಗ್ಗೆ ಸ್ವಯಂ ಸೇವಕರಿಗೆ ಮಾಹಿತಿ ನೀಡಿದರು. ಝೋಹಾರ ಕಾರ್ಯಕ್ರಮದ ನಿರೂಪಣೆ ಮಾಡಿದರು. ಜೊಸ್ವಿಟ ಸ್ವಾಗತಿಸಿ,ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು