5:57 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಆಧ್ಯಾತ್ಮ ಚಿಂತನೆಗೆ ಉತ್ತಮ ಪುಸ್ತಕಗಳ ಓದುವುದು ಅಗತ್ಯ: ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ

11/03/2024, 20:04

ಬಂಟ್ವಾಳ(reporterkarnataka.com): ಶರೀರಕ್ಕೆ ವಯಸ್ಸಾಗುವುದು ಸಹಜ. ಆದರೆ ಆತ್ಮಬೋಧೆ ಇದ್ದಾಗ ಎಲ್ಲರ ಮನಸ್ಸು ದೃಢವಾಗಿರುತ್ತದೆ. ಹಿರಿಯರು ಒಂದೆಡೆ ಸೇರಿದಾಗ ಪ್ರಾಪಂಚಿಕ ವಿಚಾರಗಳ ಬಗ್ಗೆ ಮಾತ್ರ ಚರ್ಚಿಸದೆ ಭಗವಂತನ ನಾಮಸ್ಮರಣೆ ಮಾಡಬೇಕು. ಜೊತೆಗೆ ಆಧ್ಯಾತ್ಮಿಕ ಚಿಂತನೆಗಾಗಿ ಉತ್ತಮ ಪುಸ್ತಕಗಳನ್ನು ಓದಬೇಕು. ಇದರಿಂದ ಹಿರಿಯರು ಮಾನಸಿಕವಾಗಿ ಸದೃಢವಾಗಲು ಸಾಧ್ಯವೆಂದು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಹೇಳಿದರು.
ಪೊಳಲಿಯ ಶ್ರೀ ರಾಮಕೃಷ್ಣ ತಪೋವನದ ಸಭಾಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯಾರು ನಾರಾಯಣ ಭಟ್ ಪ್ರತಿಷ್ಠಾನದ ಕಾರ್ಯ ಯೋಜನೆಗಳನ್ನು ಕಾರ್ಯಗತಗೊಳಿಸುವುದರೊಂದಿಗೆ ವಿವಿಧೋದ್ದೇಶ ಸಹಕಾರಿ ಸಂಘ ಆರಂಭಿಸಲು ಸದಸ್ಯರ ಬೆಂಬಲವು ಅಗತ್ಯವೆಂದು ತಿಳಿಸಿದರು.
ಪಿ.ವೆಂಕಟೇಶ ನಾವುಡ ಮತ್ತು ಯಶವಂತ ಪೊಳಲಿ ಮಾತನಾಡಿ, ಪ್ರತಿಷ್ಠಾನದ ಕಾರ್ಯಕ್ರಮಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು.
ಪ್ರತಿಷ್ಠಾನದ ಉಪಾಧ್ಯಕ್ಷರಾದ ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ ಉಜಿರೆ , ಗಣೇಶ್ ಭಟ್ ಕುತ್ರೊಟ್ಟು , ಸೀತಾರಾಮ ಶೆಟ್ಟಿ ,ಅನಾರು ಕೃಷ್ಣಶರ್ಮ, ರಾಜಮಣಿ ರಾಮಕುಂಜ, ಭಾರತಿ ರಾಮಕುಂಜ, ಕೆ .ಉದಯ ಶಂಕರ್ ರೈ ಪುಣಚ, ಕಸ್ತೂರಿ ಲೋಕೇಶ ಹೆಗ್ದೆ,ಚಂದ್ರಶೇಖರ ಆಳ್ವ ಪಡುಮಲೆ, ಕೆ.ರಾಮಕೃಷ್ಣ ನಾಯಕ್ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಸಹ ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿದರು. ಉಪಾಧ್ಯಕ್ಷರಾದ ಲೋಕೇಶ್ ಹೆಗ್ಡೆ ಪುತ್ತೂರು ವಂದಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು