4:32 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ 660 ಟನ್ ಗೇರು ಬೀಜ ಉತ್ಪನ್ನ; ಇನ್ನಷ್ಟು ಅಭಿವೃದ್ಧಿಗೆ ಪ್ರತಿಯೊಂದು ಮನೆಗೂ ಗೇರು ಗಿಡ: ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ

11/03/2024, 22:11

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಜ್ಯದ ಕರಾವಳಿಯಲ್ಲಿ 660 ಟನ್ ಗೇರು ಬೀಜ ಉತ್ಪತ್ತಿಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗೇರು ಕೃಷಿಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರತಿಯೊಂದು ಮನೆಗೂ ಒಂದು ಗೇರು ಗಿಡವನ್ನು ವಿತರಿಸಲಾಗುವುದು ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.
ಅವರು ಸೋಮವಾರ ತಮ್ಮ ನೂತನ ಕಚೇರಿಯನ್ನು ಉದ್ಘಾಟಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುದರು.

ಹಿಂದಿನ ಕಾಲದಲ್ಲಿ ಪ್ರತಿಯೊಂದು ಮನೆಯ ಮುಂದೆಯೂ ಒಂದೊಂದು ಗೇರು ಮರ ಇರುತ್ತಿತ್ತು. ಆದರೆ ಇತ್ತೀಚಿನ ದಿನದಲ್ಲಿ ಯಾವ ಮನೆಯ ಎದುರಲ್ಲೂ ಗೇರು ಮರ ನೋಡಲು ಸಿಗುವುದಿಲ್ಲ. ಆದುದರಿಂದ ಮತ್ತೆ ಮನೆ ಮನೆಗೆ ಗೇರು ಗಿಡವನ್ನು ವಿತರಿಸಲಾಗುವುದು. ಒಂದು ಗೇರು ಗಣ್ಣು ತಿನ್ನುವುದರಿಂದ ಅದರಲ್ಲಿ ವಿಟಮಿನ್ ‘ಸಿ’ ಅಂಶ ಹೆಚ್ಚಾಗಿದ್ದು, ಮಕ್ಕಳ ಆರೋಗ್ಯ ವೃದ್ಧಿಸುವುದು ಎಂದರು.
ಮೊದಲಿಗೆ ವಿದೇಶದಿಂದ ಗೇರು ಕೃಷಿ ಬಂದದ್ದಾದರೂ ನಂತರದ ದಿನಗಳಲ್ಲಿ ನಮ್ಮಲ್ಲಿ ಗೇರು ಕೃಷಿ ಉತ್ತಮ ರೀತಿಯಲ್ಲಿ ಬೆಳೆದಿದ್ದು, ಈಗ ರಾಜ್ಯದಲ್ಲಿ 53 ಸಾವಿರ ಟನ್ ಗೇರು ಬೀಜ ಉತ್ಪನ್ನವಾಗುತ್ತಿದ್ದು, ಕರಾವಳಿಯಲ್ಲಿ 660 ಟನ್ ಗೇರು ಬೀಜ ಉತ್ಪತ್ತಿಯಾಗುತ್ತಿದೆ ಎಂದು ಹೇಳಿದರು.
ಕರಾವಳಿಯಲ್ಲಿ 9 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಗೇರು ಕೃಷಿ ನಡೆಯುತ್ತಿದ್ದು, ದೇಶದಲ್ಲಿ 5ನೇ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಉತ್ಪನ್ನದಲ್ಲಿ 6ನೇ ಸ್ಥಾನದಲ್ಲಿದೆ. ಕಳೆದ ವರ್ಷ ಕರಾವಳಿಯಲ್ಲಿ 414 ಲಕ್ಷ ಗೇರು ಬೀಜದಿಂದ ಆದಾಯ ಬಂದಿದ್ದು, ಇದನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಸಚಿವರೊಂದಿಗೆ ಹಾಗೂ ವಿಧಾನಸಭಾ ಸ್ಪೀಕರ್ ಅವರೊಂದಿಗೆ ಮಾತನಾಡಿದ್ದು, ಅನುದಾನ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದರು.
ಕೃಷಿಯ ಅಭಿವೃದ್ಧಿಗೆ ಅರಣ್ಯ ಸಚಿವರಲ್ಲಿ ನರ್ಸರಿ ಸ್ಥಾಪನೆಗಾಗಿ 50 ಕೋಟಿ ಅನುದಾನವನ್ನು ನೀಡಿದ್ದು, ಇದರಿಂದ ಹೊಸ ಗಿಡಗಳನ್ನು ನೆಡಲಾಗುವುದು. ಈಗ ಎನ್‌ಹೆಚ್‌ಎಂ, ಆರ್‌ಕೆವಿಐ, ಡಿಸಿಡಿಇ ಇಂದ ಮಾತ್ರ ಅನುದಾನ ಬರುತ್ತಿದ್ದು, ಇದು ನಿರ್ವಹಣೆಗೆ ಸರಿಓಗುತ್ತಿದೆ. ಆದುದರಿಂದ ಕೃಷಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹೋಬಳಿ ಮಟ್ಟದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುವುದು, ನಂತರದ ದಿನಗಳಲ್ಲಿ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಸಚಿವರ ಸಮ್ಮುಖದಲ್ಲಿ ನಡೆಸಲಾಗುವುದು ಎಂದು ಹೇಳಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕಮಲಾ, ಪ್ರಶಾಂತ್ ಕಜಾವ, ಚಂದ್ರಹಾಸ್ ಕರ್ಕೆರ, ಅಪ್ಪಿ, ಶಶಿರೇಖಾ, ಕಲಾ ಮತ್ತಿತರರು ಉಪಸ್ಥಿತರಿದ್ದರು.



ಈ ಸಂದರ್ಭದಲ್ಲಿ ನೂತನ ಗೇರು ಬೀಜ ನಿಗಮ ಮಂಡಳಿ ಅಧ್ಯಕ್ಷೆ ಮಮತಾ ಗಟ್ಟಿಯಾರವನ್ನು ಪಾಲಿಕೆ ವಿಪಕ್ಷ ನಾಯಕ ಟಿ.ಪ್ರವೀಣ್ ಚಂದ್ರ ಆಳ್ವ,ಕಾಂಗ್ರೆಸ್ ನಾಯಕ ಪ್ರಶಾಂತ್ ಕಾಜವ,ಕಾಂಗ್ರೆಸ್ ಮಹಿಳಾ ಮಣಿಗಳು,ಅಧ್ಯಕ್ಷೆ ಮಮತ ಗಟ್ಟಿಯವರ ಗಂಡ ಮಗಳು,ಮಂಗಳೂರು ಪತ್ರಕರ್ತ ಸಂಘದ ವತಿಯಿಂದ ಸನ್ಮಾನಿಸಿ ಶುಭಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು