5:30 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಮಾರ್ಚ್ 25: ಮಂಗಳೂರಿನ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ನೇತೃತ್ವದಲ್ಲಿ ‘ಶಿಲುಬೆಯ ಹಾದಿ’

12/03/2024, 16:12

ಮಂಗಳೂರು(reporterkarnataka.com): ನಗರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚು ನೇತೃತ್ವದಲ್ಲಿ ಮಾರ್ಚ್ 25ರಂದು ಸಂಜೆ 4.30 ಗಂಟೆಗೆ “ಶಿಲುಬೆಯ ಹಾದಿ” (ಕುರ್ಸಾಚಿ ವಾಟ್) ನ್ನು ಸಿಟಿ ವಲಯದ 12 ಚರ್ಚುಗಳ ಸಹಯೋಗದಿಂದ ನಡೆಸಲಾಗುತ್ತದೆ.

ಕೊರ್ಡೆಲ್, ವಾಮಂಜೂರ್, ಪಾಲ್ದಾನೆ, ಬೊಂದೇಲ್, ದೇರೆಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳು ಭಾಗವಹಿಸಲಿದ್ದು, ಏಸುಕ್ರಿಸ್ತರು ಶಿಲುಬೆಯ 14 ಹಾದಿಗಳನ್ನು ಈ ಚರ್ಚುಗಳ ಕಲಾವಿದರ ನಟನೆಯ ಮೂಲಕ ಚರ್ಚಿನ ಆವರಣದ ಒಳಗೆ ನಡೆಸಲಾಗುವುದು. ಶಿಲುಬೆಯ ಹಾದಿಯ 14 ನಿಲ್ದಾಣಗಳನ್ನು (ಸ್ಟೇಶನ್) ನ್ನು ವಲಯದ 12 ಚರ್ಚುಗಳ ಹಾಗೂ ಧರ್ಮಗುರುಗಳ ಮತ್ತು ಧರ್ಮಭಗಿನಿಯರ ಪ್ರತಿನಿಧಿಗಳು ನಡೆಸಿಕೊಡುತ್ತಾರೆ. ಸಂಜೆ 4.30ಕ್ಕೆ ಬಲಿಪೂಜೆ, ನಂತರ ಶಿಲುಬೆಯ ಹಾದಿ, 12ನೇ ನಿಲ್ದಾಣದಲ್ಲಿ ಪ್ರವಚನವನ್ನು ನಡೆಸಿಲಾಗುವುದು.
ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್ ಅವರು
ಸ್ಕ್ರಿಪ್ಟ್ ಬಿಡುಗಡೆ ಮಾಡಿದರು. ಸಹಾಯಕ ಧರ್ಮಗುರುಗಳಾದ ವಂ| ಪಾ| ಪಾವುಲ್ ಡಿ’ಸೋಜ, ಧರ್ಮಪ್ರಾಂತ್ಯದ ಪಿ.ಆರ್.ಓ. ರೋಯ್ ಕ್ಯಾಸ್ಟಲಿನೋ, ಚರ್ಚಿನ ಉಪಾಧ್ಯಕ್ಷ ರೂತ್ ಕ್ಯಾಸ್ಟಲಿನೋ, ಕಾರ್ಯದರ್ಶಿ ಅನಿಲ್ ಡೆಸಾ, ಸರ್ವ ಆಯೋಗದ ಸಂಚಾಲಕ ಡೊಲ್ಫಿ ಡಿ’ಸೋಜ, 12 ಚರ್ಚುಗಳ ಉಪಾಧ್ಯಕ್ಷರು ಉಪಸ್ಥಿತರಿದ್ದರು. ಕಲಾವಿದರಿಗೆ ನಿರ್ದೇಶಕರಾಗಿ ಡೆನ್ನಿಸ್ ಮೊಂತೆರೋ ಹಾಗೂ ಸ್ಟಾö್ಯನಿ ಅಲ್ವಾರೀಸ್, ಏಸು ಕ್ರಿಸ್ತರ ಪಾತ್ರ ವನ್ನು ವಿಕಾಸ್ ಕುಲಾಕುಲ್, ಮದರ್ ಮೇರಿಯ ಪಾತ್ರವನ್ನು ಆ್ಯಶೆಲ್ ಡಿ’ಸಿಲ್ವಾ, ಪಿಲಾತನ ಪಾತ್ರವನ್ನು ಆಲ್ವಿನ್ ಪಾಯಸ್ ಮುಂತಾದವರು ನಿರ್ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು