11:22 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷ ಹಲ್ಲೆ; ಪಾಪಿ ಸೊಸೆಯ ಬಂಧನ

12/03/2024, 17:30

ಮಂಗಳೂರು(reporterkarnataka.com): ನಗರದ ಕುಲಶೇಖರ ಸಮೀಪ ವೃದ್ಧ ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷವಾಗಿ ದೈಹಿಕ ಹಲ್ಲೆ ನಡೆಸಿದ ಸೊಸೆಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.


ಅತ್ತಾವರ ಮೆಸ್ಕಾಂ ಕಚೇರಿಯಲ್ಲಿ ಅಧಿಕಾರಿಯಾಗಿರುವ
ಉಮಾಶಂಕರಿ ಎಂಬವರು ಬಂಧಿತ ಮಹಿಳೆ. ನಾದಿನಿ ಪ್ರಿಯಾ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಉಮಾಶಂಕರಿ ಅವರ ಪತಿ ವಿದೇಶದಲ್ಲಿ ನೌಕರಿಯಲ್ಲಿದ್ದು, ಮನೆಯಲ್ಲಿ ನಡೆಯುವ ಘಟನೆಯನ್ನು ಸಿಸಿ ಕ್ಯಾಮೆರಾ ಮೂಲಕ ಮೊಬೈಲ್ ನಲ್ಲಿ ನೋಡುತ್ತಿದ್ದರು. ತನ್ನ ಪತ್ನಿ ಅಪ್ಪನ ಮೇಲೆ ದೈಹಿಕ ಹಲ್ಲೆ ನಡೆಸಿರುವುದನ್ನು ಕಂಡು ನೊಂದ ಪತಿ, ತನ್ನ ತಂಗಿಯಲ್ಲಿ ಉಮಾಶಂಕರಿ ವಿರುದ್ಧ ದೂರು ನೀಡುವಂತೆ ಸೂಚನೆ ನೀಡಿದ್ದರು.
ಮಾವನ ಮೇಲೆ ಸೊಸೆ ನಡೆಸಿದ ಹಲ್ಲೆಯ ಸಿಸಿ ಕ್ಯಾಮೆರಾ ಪೂಟೇಜ್ ನಿನ್ನೆಯೇ ಎಲ್ಲೆಡೆ ವೈರಲ್ ಆಗಿತ್ತು. ಜನರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ
ಬುದ್ದಿವಂತರ ಜಿಲ್ಲೆಯ ಜನರು ತಲೆತಗ್ಗಿಸುವಂತೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು