8:59 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬಿಜೆಪಿ ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ, ಎಂ.ಪಿ. ಕುಮಾರಸ್ವಾಮಿ ಕಾಂಗ್ರೆಸ್ ಗೆ ಸೇರ್ಪಡೆ

12/03/2024, 22:57

ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದೇಶಾದ್ಯಂತ ಪಕ್ಷಾಂತರ ಪರ್ವ ಆರಂಭವಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೂಡಿಗೆರೆ ಮಾಜಿ ಶಾಸಕ ಎಂ. ಪಿ. ಕುಮಾರಸ್ವಾಮಿ ಹಾಗೂ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ. ಎಂ. ಸುಕುಮಾರ್‌ ಶೆಟ್ಟಿ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಖ ಡಿ. ಕೆ. ಶಿವಕುಮಾರ್ ಸಮಕ್ಷಮದಲ್ಲಿ ಕಾಂಗ್ರೆಸ್ ಸೇರಿದ್ದಾರೆ.
ಬೈಂದೂರು ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಬಿ. ಎಂ. ಸುಕುಮಾರ್ ಶೆಟ್ಟಿಗೆ ಅವರಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ
ಟಿಕೆಟ್ ನೀಡಿರಲಿಲ್ಲ. ಇದೀಗ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಅವರು ಕಾಂಗ್ರೆಸ್ ಸೇರಿದ್ದಾರೆ.
ಎಂ. ಪಿ. ಕುಮಾರಸ್ವಾಮಿ ಅವರಿಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಮೂಡಿಗೆರೆಯಿಂದ ಮತ್ತೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಕಾಂಗ್ರೆಸ್ ಟಿಕೆಟ್ ಗೆ ಪ್ರಯತ್ನಿಸಿದ್ದ ಅವರು
ಜೆಡಿಎಸ್‌ನಿಂದ ಮೂಡಿಗೆರೆಯಲ್ಲಿ ಕಣಕ್ಕಿಳಿದು ಸೋಲು ಕಂಡಿದ್ದರು. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ ಗೆಲುವು ಸಾಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು