3:04 AM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮಾಜಿ ಸಂಸದರ ಮೊದಲ ಪುಣ್ಯಸ್ಮರಣೆ: ನಂಜನಗೂಡಿನ ನೂತನ ರೈಲ್ವೆ ಮೇಲ್ಸೇತುವೆಗೆ ದೃವನಾರಾಯಣ್ ಅವರ ಹೆಸರಿಡುವಂತೆ ಅಭಿಮಾನಿಗಳ ಒತ್ತಾಯ

12/03/2024, 23:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಉತ್ತಮ ಸಂಸದೀಯ ಪಟು ಮಾಜಿ ಸಂಸದ ದೃವನಾರಾಯಣ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಂಜನಗೂಡಿನ ಕಾಂಗ್ರೆಸ್ ಪಕ್ಷದ ವತಿಯಿಂದ ಪಕ್ಷದ ಕಚೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.


ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಸೇರಿದಂತೆ ಪಕ್ಷದ ಮುಖಂಡರು ದೃವನಾರಾಯಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಬಳಿಕ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಹಲವು ಮುಖಂಡರು ಮಾತನಾಡಿ ದೃವನಾರಾಯಣ್ ಅವರು ಶಾಸಕರಾಗಿ, ಸಂಸದರಾಗಿ ನಂಜನಗೂಡು ಸೇರಿದಂತೆ ಇಡೀ ಚಾಮರಾಜನಗರ ಲೋಕಸಭಾ ಕ್ಷೇತ್ರದಾದ್ಯಂತ ಶಿಕ್ಷಣ, ಆರೋಗ್ಯ, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಿ ಕಡಿಮೆ ಅವಧಿಯಲ್ಲಿ ದಣಿವರಿಯದ ನಾಯಕರಾಗಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಜನಾನುರಾಗಿಯಾಗಿದ್ದರು ಎಂದು ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಅವರ ಹೆಸರು ಇನ್ನೂ ಚಿರಾಯುವಾಗಿ ಉಳಿಯಬೇಕಾದರೆ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಾದ್ಯಂತ ರಸ್ತೆಗಳು, ವೃತ್ತಗಳು, ಅವರು ನಿರ್ಮಿಸಿದ ರೈಲ್ವೆ ಮೇಲ್ಸೇತುವೆಗಳಿಗೆ ಅವರ ಹೆಸರಿಡುವಂತೆ ಒತ್ತಾಯಿಸಿದರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಟ್ಟಿಮಹೇಶ್, ನಗರ ಘಟಕದ ಅಧ್ಯಕ್ಷ ಶಂಕರ್, ಮುಖಂಡರುಗಳಾದ ಮಾರುತಿ, ನಾಗೇಶ್ ರಾಜ್ , ಮಾದಪ್ಪ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ , ಶ್ರೀಧರ್, ಶಶಿರೇಖಾ ಕರಳಪುರನಾಗರಾಜ್, ನಗರಸಭಾ ಸದಸ್ಯರುಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು