11:27 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ಅವರ ‘ನಮ್ಮ ಮಂಗಳೂರು’ ಪುಸ್ತಕ ಹಸ್ತಾಂತರ; ಮೇಯರ್ ಸಮರ್ಪಣೆ

12/08/2021, 13:46

ಮಂಗಳೂರು(reporterkarnataka.com):

ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ರಚಿಸಿದ ‘ನಮ್ಮ ಮಂಗಳೂರು’ ಪುಸ್ತಕವನ್ನು  ಮಂಗಳೂರು ಮೇಯರ್  ಪ್ರೇಮಾನಂದ ಶೆಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ನಗರದಲ್ಲಿ ಹಸ್ತಾಂತರಿಸಿದರು.

ಈ ಪುಸ್ತಕ ಮಂಗಳೂರಿನ ಸಮಗ್ರ ಮಾಹಿತಿ ಒಳಗೊಂಡಿದೆ. ಪುಸ್ತಕದ ಬಗ್ಗೆ ಸಿಎಂ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪುಸ್ತಕ ದಲ್ಲಿ ಏನೇನಿದೆ ?

* ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಬರೆದಿರುವ ‘ನಮ್ಮ ಮಂಗಳೂರು’ ಅತ್ಯಪೂರ್ವ ಮಾಹಿತಿಗಳಿರುವ ಅಪರೂಪದ ಕೃತಿ. 

*  ಮಂಗಳೂರು ಸುತ್ತಮುತ್ತಲಿನ ಪ್ರವಾಸಿ ತಾಣಗಳ ಪೂರ್ತಿ ಚಿತ್ರಣ.

* ದೇವಸ್ಥಾನ, ದೈವಸ್ಥಾನ, ಮಸೀದಿ, ಚರ್ಚ್ ಹೀಗೆ ಎಲ್ಲಾ ಶ್ರದ್ಧಾ ಕೇಂದ್ರಗಳ ವಿವರಗಳು.

* ಶೈಕ್ಷಣಿಕ ಹಬ್ ಎಂಬ ಹೆಸರುವಾಸಿಯಾಗಿರುವ ಮಂಗಳೂರಿನಲ್ಲಿ ಎಷ್ಟು ಶಾಲೆ, ಕಾಲೇಜು, ವೈದ್ಯಕೀಯ, ಎಂಜೀನಿಯರಿಂಗ್, ವೃತ್ತಿಪರ ಕಾಲೇಜುಗಳಿವೆ ಎಂಬುವುದರ ಡಿಟೈಲ್ಸ್ ನಮ್ಮ ಮಂಗಳೂರು ಗ್ರಂಥದಲ್ಲಿದೆ. 

* ಮಂಗಳೂರು ಸುತ್ತಮುತ್ತ ಎಷ್ಟು ಆಸ್ಪತ್ರೆಗಳಿವೆ, ಹೊಟೇಲ್‌ಗಳಿವೆ ಎಂಬುವುದರ ಚಿತ್ರಣ.

*ಮಂಗಳೂರು ಸುತ್ತಮುತ್ತ ಇರುವ ಕೆರೆ, ಮಾರುಕಟ್ಟೆ, ಮೈದಾನ, ಪಾರ್ಕ್, ಕ್ರೀಡಾಂಗಣ, ಸ್ಮಶಾನಗಳ ಮಾಹಿತಿಗಳು

* ನಮ್ಮ ಸಂಸದರು, ಶಾಸಕರು, ಮೇಯರ್, ಉಪಮೇಯರ್, ಕಾರ್ಪೊರೇಟರ್‌ಗಳ ಸಚಿತ್ರ ವಿವರಗಳು.

*ಕಾರ್ಪೊರೇಶನ್‌ನಿಂದ ನಾಗರಿಕರಿಗೆ ಲಭಿಸುವ ಸೌಲಭ್ಯಗಳೇನು, ಅದನ್ನು ಪಡೆದುಕೊಳ್ಳಲು ಏನೇನು ಮಾಡಬೇಕು ಮಾರ್ಗದರ್ಶಿ ಮಾಹಿತಿ.

*ಮಂಗಳೂರಿನ ಅಪರೂಪದ ಫೋಟೋಗಳ ಸಂಗ್ರಹ.

*ಪೊಲೀಸ್ ಠಾಣೆ, ಮಾಧ್ಯಮ ಸಂಸ್ಥೆಗಳುಗಳ ದೂರವಾಣಿ ಸಂಖ್ಯೆಗಳು.

*ಯಾವ ನಂಬರ್‌ನ ಬಸ್ ಎಲ್ಲಿ ಸಂಚರಿಸುತ್ತೆ ಎಂಬುದರ ಮಾಹಿತಿಗಳು.

ಸಂಗ್ರಹಯೋಗ್ಯ ಅಪರೂಪದ ಕೃತಿ ನಮ್ಮ ಮಂಗಳೂರು.
ನಮ್ಮ ಮಂಗಳೂರು ಕೃತಿಗಾಗಿ ಸಂಪರ್ಕಿಸಿರಿ :  9343381791/ 9731976777

ಇತ್ತೀಚಿನ ಸುದ್ದಿ

ಜಾಹೀರಾತು