6:14 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ಅವರ ‘ನಮ್ಮ ಮಂಗಳೂರು’ ಪುಸ್ತಕ ಹಸ್ತಾಂತರ; ಮೇಯರ್ ಸಮರ್ಪಣೆ

12/08/2021, 13:46

ಮಂಗಳೂರು(reporterkarnataka.com):

ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ರಚಿಸಿದ ‘ನಮ್ಮ ಮಂಗಳೂರು’ ಪುಸ್ತಕವನ್ನು  ಮಂಗಳೂರು ಮೇಯರ್  ಪ್ರೇಮಾನಂದ ಶೆಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ನಗರದಲ್ಲಿ ಹಸ್ತಾಂತರಿಸಿದರು.

ಈ ಪುಸ್ತಕ ಮಂಗಳೂರಿನ ಸಮಗ್ರ ಮಾಹಿತಿ ಒಳಗೊಂಡಿದೆ. ಪುಸ್ತಕದ ಬಗ್ಗೆ ಸಿಎಂ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪುಸ್ತಕ ದಲ್ಲಿ ಏನೇನಿದೆ ?

* ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಬರೆದಿರುವ ‘ನಮ್ಮ ಮಂಗಳೂರು’ ಅತ್ಯಪೂರ್ವ ಮಾಹಿತಿಗಳಿರುವ ಅಪರೂಪದ ಕೃತಿ. 

*  ಮಂಗಳೂರು ಸುತ್ತಮುತ್ತಲಿನ ಪ್ರವಾಸಿ ತಾಣಗಳ ಪೂರ್ತಿ ಚಿತ್ರಣ.

* ದೇವಸ್ಥಾನ, ದೈವಸ್ಥಾನ, ಮಸೀದಿ, ಚರ್ಚ್ ಹೀಗೆ ಎಲ್ಲಾ ಶ್ರದ್ಧಾ ಕೇಂದ್ರಗಳ ವಿವರಗಳು.

* ಶೈಕ್ಷಣಿಕ ಹಬ್ ಎಂಬ ಹೆಸರುವಾಸಿಯಾಗಿರುವ ಮಂಗಳೂರಿನಲ್ಲಿ ಎಷ್ಟು ಶಾಲೆ, ಕಾಲೇಜು, ವೈದ್ಯಕೀಯ, ಎಂಜೀನಿಯರಿಂಗ್, ವೃತ್ತಿಪರ ಕಾಲೇಜುಗಳಿವೆ ಎಂಬುವುದರ ಡಿಟೈಲ್ಸ್ ನಮ್ಮ ಮಂಗಳೂರು ಗ್ರಂಥದಲ್ಲಿದೆ. 

* ಮಂಗಳೂರು ಸುತ್ತಮುತ್ತ ಎಷ್ಟು ಆಸ್ಪತ್ರೆಗಳಿವೆ, ಹೊಟೇಲ್‌ಗಳಿವೆ ಎಂಬುವುದರ ಚಿತ್ರಣ.

*ಮಂಗಳೂರು ಸುತ್ತಮುತ್ತ ಇರುವ ಕೆರೆ, ಮಾರುಕಟ್ಟೆ, ಮೈದಾನ, ಪಾರ್ಕ್, ಕ್ರೀಡಾಂಗಣ, ಸ್ಮಶಾನಗಳ ಮಾಹಿತಿಗಳು

* ನಮ್ಮ ಸಂಸದರು, ಶಾಸಕರು, ಮೇಯರ್, ಉಪಮೇಯರ್, ಕಾರ್ಪೊರೇಟರ್‌ಗಳ ಸಚಿತ್ರ ವಿವರಗಳು.

*ಕಾರ್ಪೊರೇಶನ್‌ನಿಂದ ನಾಗರಿಕರಿಗೆ ಲಭಿಸುವ ಸೌಲಭ್ಯಗಳೇನು, ಅದನ್ನು ಪಡೆದುಕೊಳ್ಳಲು ಏನೇನು ಮಾಡಬೇಕು ಮಾರ್ಗದರ್ಶಿ ಮಾಹಿತಿ.

*ಮಂಗಳೂರಿನ ಅಪರೂಪದ ಫೋಟೋಗಳ ಸಂಗ್ರಹ.

*ಪೊಲೀಸ್ ಠಾಣೆ, ಮಾಧ್ಯಮ ಸಂಸ್ಥೆಗಳುಗಳ ದೂರವಾಣಿ ಸಂಖ್ಯೆಗಳು.

*ಯಾವ ನಂಬರ್‌ನ ಬಸ್ ಎಲ್ಲಿ ಸಂಚರಿಸುತ್ತೆ ಎಂಬುದರ ಮಾಹಿತಿಗಳು.

ಸಂಗ್ರಹಯೋಗ್ಯ ಅಪರೂಪದ ಕೃತಿ ನಮ್ಮ ಮಂಗಳೂರು.
ನಮ್ಮ ಮಂಗಳೂರು ಕೃತಿಗಾಗಿ ಸಂಪರ್ಕಿಸಿರಿ :  9343381791/ 9731976777

ಇತ್ತೀಚಿನ ಸುದ್ದಿ

ಜಾಹೀರಾತು