4:24 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಹುಲ್ಲಹಳ್ಳಿ ಮಾರಮ್ಮ ಜಾತ್ರೆ; ಕಪಿಲಾ ನದಿಯಲ್ಲಿ ಗಂಗಾ ಪೂಜೆ

14/03/2024, 16:41

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಗ್ರಾಮ ದೇವತೆ ಮಾರಿಹಬ್ಬವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಬುಧವಾರ ಬೆಳಗ್ಗೆಯಿಂದಲೇ ಭಕ್ತರು ದೇವಾಲಯಕ್ಕೆ ಬಂದು ಗ್ರಾಮ ದೇವತೆಗೆ ಪ್ರಿಯವಾದ ತಂಬಿಟ್ಟು ಹಣ್ಣು ಕಾಯಿ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು. ಹಬ್ಬದ ಪ್ರಯುಕ್ತ ಮಾರಿಗುಡಿ ಸೇರಿದಂತೆ ಸುತ್ತಮುತ್ತ ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಿ ಕಂಗೊಳಿಸುತ್ತಿತ್ತು.


ಗ್ರಾಮ ದೇವತೆ ಮೂರ್ತಿಯನ್ನು ಸಹ ಹಾಗೂ ವಿದ್ಯುತ್ ದೀಪಗಳಿಂದ ವಿಶೇಷವಾಗಿ ಅಲಂಕರಿಸಿ ದಿನವಿಡೀ ಪೂಜೆ ಸಲ್ಲಿಸಲಾಯಿತು. ರಾತ್ರಿ ಕಪಿಲಾ ನದಿಯಲ್ಲಿ ಗಂಗಾ ಪೂಜೆ ಸಲ್ಲಿಸಿದ ಬಳಿಕ ಹರಕೆ ಹೊತ್ತ ಮಹಿಳಾ ಭಕ್ತರಿಗೆ ಬಾಯಿ ಬೀಗ ಹಾಕುವ ಮೂಲಕ ಮಂಗಳವಾದ್ಯ ವೀರಗಾಸೆ ಕುಣಿತ ಸತ್ತಿಗೆ ಸುರಪಾಣಿಗಳೊಂದಿಗೆ ದೇವಾಲಯಕ್ಕೆ ಬರಲಾಯಿತು.
ಮೆರವಣಿಗೆ ಉದ್ದಕ್ಕೂ ಗ್ರಾಮದ ಯುವಕರ ವೀರಮಕ್ಕಳ ಕುಣಿತ ನೋಡುಗರ ಮನಸೂರೆಗೊಂಡಿತು.
ಹುಲ್ಲಹಳ್ಳಿಯೂ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಹುಲ್ಲಹಳ್ಳಿ ಪೊಲೀಸರು ಬಂದೋಬಸ್ತ್ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು