8:09 PM Monday25 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಶಿರೂರು ಮಠಕ್ಕೆ ನೂತನ ಯತಿಗಳ ನೇಮಕ : ವಿಶ್ವ ಹಿಂದೂ ಪರಿಷತ್ ಸ್ವಾಗತ

19/05/2021, 10:56

ಮಂಗಳೂರು(reporterkarnataka news) :ಇತ್ತೀಚೆಗೆ ಉಡುಪಿ ಶಿರೂರು ಮಠಕ್ಕೆ ಉತ್ತರಾಕಾರಿಯಾಗಿ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರನ್ನು ನಿಯುಕ್ತಿಗೊಳಿಸಿರುವುದು ಸಮಾಜಕ್ಕೆ ಸಂತಸ ತಂದಿದ್ದು, ಉಡುಪಿ ಅಷ್ಟಮಠಗಳು ಉತ್ತರಾಕಾರಿಗಳ ಆಯ್ಕೆಯಲ್ಲಿ ಯೋಗ್ಯ ಮಾನದಂಡಗಳನ್ನು ರೂಪಿಸುವ ಮೂಲಕ ಮಾದರಿಯಾಗಿರುವುದು ಕೂಡಾ ಸ್ವಾಗತಾರ್ಹ ಎಂಬುದಾಗಿ ವಿಶ್ವಹಿಂದು ಪರಿಷತ್ತು ಅಭಿನಂದಿಸಿದೆ.

ಶಿರೂರು ಮಠದ ದ್ವಂದ್ವ ಮಠವಾದ ಶ್ರೀ ಸೋದೆ ವಾದಿರಾಜ ಮಠದ ಸ್ವಾಮಿಗಳಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು ಧಾರ್ಮಿಕ ಹಿನ್ನೆಲೆಯ ಅನಿರುದ್ಧ ಸರಳತ್ತಾಯರನ್ನು ಆಯ್ಕೆ ಮಾಡಿ ಯೋಗ್ಯ ರೀತಿಯಲ್ಲಿ ಶಾಸ್ತ್ರೋಕ್ತ  ಸನ್ಯಾಸದೀಕ್ಷೆಯ ಮೂಲಕ 

ಶ್ರೀ ವೇದವರ್ಧನ ಎಂಬ ಅಭಿನಾಮ ನೀಡಿ ಶಿರೂರು ಮಠದ ಯತಿಗಳನ್ನಾಗಿ ನೇಮಿಸಿರುವುದು ಸರ್ವರ ಪ್ರಶಂಸೆಗೆ ಕಾರಣವಾಗಿದೆ ಎಂಬುದಾಗಿ ವಿಶ್ವಹಿಂದು ಪರಿಷತ್ತಿನ ಪ್ರಾಂತ ಅಧ್ಯಕ್ಷರಾದ ಪ್ರೊ.ಎಂ.ಬಿ.ಪುರಾಣಿಕ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ .

ಇತ್ತೀಚೆಗೆ ಅಷ್ಟಮಠಗಳಿಗೆ ಹೊಸ ಶಿಷ್ಯರನ್ನು ನಿಯುಕ್ತಿಗೊಳಿಸುವಾಗ ಯೋಗ್ಯ ಮಾನದಂಡಗಳನ್ನು ಅಳವಡಿಸಿ ಸತ್ಸಂಪ್ರದಾಯಕ್ಕೆ ಮುಂದಾಗಿರುವುದು ಹಿಂದು ಸಮಾಜಕ್ಕೆ ಹೆಮ್ಮೆ  ಮತ್ತು ಅಭಿಮಾನ ಮೂಡಿಸುವ ಸಂಗತಿಯಾಗಿದೆ.ಶ್ರೀಶಿರೂರು ಮಠದ ನವಯತಿಗಳಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರಿಗೆ ವಿಶ್ವಹಿಂದು ಪರಿಷತ್ತು ಶುಭಕೋರುತ್ತದೆ. ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಅವರಿಂದ ಹಿಂದು ಸಮಾಜಕ್ಕೆ ಉತ್ತಮ ಮಾರ್ಗದರ್ಶನ ಲಭಿಸುವಂತಾಗಲು ಶ್ರೀಕೃಷ್ಣನ ಅನುಗ್ರಹ ಇರಲೆಂದು ವಿಹಿಂಪ ಪ್ರಾರ್ಥಿಸುತ್ತದೆ ಎಂದು ಪ್ರೊ.ಪುರಾಣಿಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು