6:45 PM Friday20 - March 2026
ಬ್ರೇಕಿಂಗ್ ನ್ಯೂಸ್
ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ

ಇತ್ತೀಚಿನ ಸುದ್ದಿ

ಶಿರೂರು ಮಠಕ್ಕೆ ನೂತನ ಯತಿಗಳ ನೇಮಕ : ವಿಶ್ವ ಹಿಂದೂ ಪರಿಷತ್ ಸ್ವಾಗತ

19/05/2021, 10:56

ಮಂಗಳೂರು(reporterkarnataka news) :ಇತ್ತೀಚೆಗೆ ಉಡುಪಿ ಶಿರೂರು ಮಠಕ್ಕೆ ಉತ್ತರಾಕಾರಿಯಾಗಿ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರನ್ನು ನಿಯುಕ್ತಿಗೊಳಿಸಿರುವುದು ಸಮಾಜಕ್ಕೆ ಸಂತಸ ತಂದಿದ್ದು, ಉಡುಪಿ ಅಷ್ಟಮಠಗಳು ಉತ್ತರಾಕಾರಿಗಳ ಆಯ್ಕೆಯಲ್ಲಿ ಯೋಗ್ಯ ಮಾನದಂಡಗಳನ್ನು ರೂಪಿಸುವ ಮೂಲಕ ಮಾದರಿಯಾಗಿರುವುದು ಕೂಡಾ ಸ್ವಾಗತಾರ್ಹ ಎಂಬುದಾಗಿ ವಿಶ್ವಹಿಂದು ಪರಿಷತ್ತು ಅಭಿನಂದಿಸಿದೆ.

ಶಿರೂರು ಮಠದ ದ್ವಂದ್ವ ಮಠವಾದ ಶ್ರೀ ಸೋದೆ ವಾದಿರಾಜ ಮಠದ ಸ್ವಾಮಿಗಳಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು ಧಾರ್ಮಿಕ ಹಿನ್ನೆಲೆಯ ಅನಿರುದ್ಧ ಸರಳತ್ತಾಯರನ್ನು ಆಯ್ಕೆ ಮಾಡಿ ಯೋಗ್ಯ ರೀತಿಯಲ್ಲಿ ಶಾಸ್ತ್ರೋಕ್ತ  ಸನ್ಯಾಸದೀಕ್ಷೆಯ ಮೂಲಕ 

ಶ್ರೀ ವೇದವರ್ಧನ ಎಂಬ ಅಭಿನಾಮ ನೀಡಿ ಶಿರೂರು ಮಠದ ಯತಿಗಳನ್ನಾಗಿ ನೇಮಿಸಿರುವುದು ಸರ್ವರ ಪ್ರಶಂಸೆಗೆ ಕಾರಣವಾಗಿದೆ ಎಂಬುದಾಗಿ ವಿಶ್ವಹಿಂದು ಪರಿಷತ್ತಿನ ಪ್ರಾಂತ ಅಧ್ಯಕ್ಷರಾದ ಪ್ರೊ.ಎಂ.ಬಿ.ಪುರಾಣಿಕ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ .

ಇತ್ತೀಚೆಗೆ ಅಷ್ಟಮಠಗಳಿಗೆ ಹೊಸ ಶಿಷ್ಯರನ್ನು ನಿಯುಕ್ತಿಗೊಳಿಸುವಾಗ ಯೋಗ್ಯ ಮಾನದಂಡಗಳನ್ನು ಅಳವಡಿಸಿ ಸತ್ಸಂಪ್ರದಾಯಕ್ಕೆ ಮುಂದಾಗಿರುವುದು ಹಿಂದು ಸಮಾಜಕ್ಕೆ ಹೆಮ್ಮೆ  ಮತ್ತು ಅಭಿಮಾನ ಮೂಡಿಸುವ ಸಂಗತಿಯಾಗಿದೆ.ಶ್ರೀಶಿರೂರು ಮಠದ ನವಯತಿಗಳಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರಿಗೆ ವಿಶ್ವಹಿಂದು ಪರಿಷತ್ತು ಶುಭಕೋರುತ್ತದೆ. ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಅವರಿಂದ ಹಿಂದು ಸಮಾಜಕ್ಕೆ ಉತ್ತಮ ಮಾರ್ಗದರ್ಶನ ಲಭಿಸುವಂತಾಗಲು ಶ್ರೀಕೃಷ್ಣನ ಅನುಗ್ರಹ ಇರಲೆಂದು ವಿಹಿಂಪ ಪ್ರಾರ್ಥಿಸುತ್ತದೆ ಎಂದು ಪ್ರೊ.ಪುರಾಣಿಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು