5:21 AM Friday31 - July 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಶಿರೂರು ಮಠಕ್ಕೆ ನೂತನ ಯತಿಗಳ ನೇಮಕ : ವಿಶ್ವ ಹಿಂದೂ ಪರಿಷತ್ ಸ್ವಾಗತ

19/05/2021, 10:56

ಮಂಗಳೂರು(reporterkarnataka news) :ಇತ್ತೀಚೆಗೆ ಉಡುಪಿ ಶಿರೂರು ಮಠಕ್ಕೆ ಉತ್ತರಾಕಾರಿಯಾಗಿ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರನ್ನು ನಿಯುಕ್ತಿಗೊಳಿಸಿರುವುದು ಸಮಾಜಕ್ಕೆ ಸಂತಸ ತಂದಿದ್ದು, ಉಡುಪಿ ಅಷ್ಟಮಠಗಳು ಉತ್ತರಾಕಾರಿಗಳ ಆಯ್ಕೆಯಲ್ಲಿ ಯೋಗ್ಯ ಮಾನದಂಡಗಳನ್ನು ರೂಪಿಸುವ ಮೂಲಕ ಮಾದರಿಯಾಗಿರುವುದು ಕೂಡಾ ಸ್ವಾಗತಾರ್ಹ ಎಂಬುದಾಗಿ ವಿಶ್ವಹಿಂದು ಪರಿಷತ್ತು ಅಭಿನಂದಿಸಿದೆ.

ಶಿರೂರು ಮಠದ ದ್ವಂದ್ವ ಮಠವಾದ ಶ್ರೀ ಸೋದೆ ವಾದಿರಾಜ ಮಠದ ಸ್ವಾಮಿಗಳಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು ಧಾರ್ಮಿಕ ಹಿನ್ನೆಲೆಯ ಅನಿರುದ್ಧ ಸರಳತ್ತಾಯರನ್ನು ಆಯ್ಕೆ ಮಾಡಿ ಯೋಗ್ಯ ರೀತಿಯಲ್ಲಿ ಶಾಸ್ತ್ರೋಕ್ತ  ಸನ್ಯಾಸದೀಕ್ಷೆಯ ಮೂಲಕ 

ಶ್ರೀ ವೇದವರ್ಧನ ಎಂಬ ಅಭಿನಾಮ ನೀಡಿ ಶಿರೂರು ಮಠದ ಯತಿಗಳನ್ನಾಗಿ ನೇಮಿಸಿರುವುದು ಸರ್ವರ ಪ್ರಶಂಸೆಗೆ ಕಾರಣವಾಗಿದೆ ಎಂಬುದಾಗಿ ವಿಶ್ವಹಿಂದು ಪರಿಷತ್ತಿನ ಪ್ರಾಂತ ಅಧ್ಯಕ್ಷರಾದ ಪ್ರೊ.ಎಂ.ಬಿ.ಪುರಾಣಿಕ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ .

ಇತ್ತೀಚೆಗೆ ಅಷ್ಟಮಠಗಳಿಗೆ ಹೊಸ ಶಿಷ್ಯರನ್ನು ನಿಯುಕ್ತಿಗೊಳಿಸುವಾಗ ಯೋಗ್ಯ ಮಾನದಂಡಗಳನ್ನು ಅಳವಡಿಸಿ ಸತ್ಸಂಪ್ರದಾಯಕ್ಕೆ ಮುಂದಾಗಿರುವುದು ಹಿಂದು ಸಮಾಜಕ್ಕೆ ಹೆಮ್ಮೆ  ಮತ್ತು ಅಭಿಮಾನ ಮೂಡಿಸುವ ಸಂಗತಿಯಾಗಿದೆ.ಶ್ರೀಶಿರೂರು ಮಠದ ನವಯತಿಗಳಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರಿಗೆ ವಿಶ್ವಹಿಂದು ಪರಿಷತ್ತು ಶುಭಕೋರುತ್ತದೆ. ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಅವರಿಂದ ಹಿಂದು ಸಮಾಜಕ್ಕೆ ಉತ್ತಮ ಮಾರ್ಗದರ್ಶನ ಲಭಿಸುವಂತಾಗಲು ಶ್ರೀಕೃಷ್ಣನ ಅನುಗ್ರಹ ಇರಲೆಂದು ವಿಹಿಂಪ ಪ್ರಾರ್ಥಿಸುತ್ತದೆ ಎಂದು ಪ್ರೊ.ಪುರಾಣಿಕ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು