3:20 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನಿಂದಲೂ ಹೊಸ ಮುಖ?; ಪದ್ಮರಾಜ್ ಆರ್. ಕೈ ಅಭ್ಯರ್ಥಿ?

15/03/2024, 17:19

ಮಂಗಳೂರು(reporterkarnataka.com):ಮುಂಬರುವ ಸಂಸತ್ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈಗಾಗಲೇ ಬಿಜೆಪಿ ಹೊಸ ಮುಖವನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಕೂಡ ಹೊಸಬರಿಗೆ ಮಣೆ ಹಾಕಲಿದೆ ಎಂದು ತಿಳಿದು ಬಂದಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಗಳೂರಿನ ಯುವ ವಕೀಲ ಪದ್ಮರಾಜ್ ಆರ್. ಅವರನ್ನು ಕಾಂಗ್ರೆಸ್ ಅಖಾಡಕ್ಕಿಳಿಸಲಿದೆ.
ಪದ್ಮರಾಜ್ ಅವರ ಹೆಸರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿದೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಪದ್ಮರಾಜ್ ರಾಮಯ್ಯ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ .
ಕೆಪಿಸಿಸಿಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ರವಾನೆಯಾದ ಪಟ್ಟಿಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಪದ್ಮರಾಜ್ ಅವರ ಹೆಸರಿತ್ತು. ಸೊರಕೆ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಯಾಟಿಂಗ್ ಮಾಡಿದ್ದರು ಎನ್ನಲಾಗಿದೆ. ಸಿದ್ದರಾಮಯ್ಯ ಅವರ ಮೊದಲ ಸರಕಾರದಲ್ಲಿ ಸಚಿವ ಸಂಪುಟದಿಂದ ಸೊರಕೆ ಅವರನ್ನು ಕೈಬಿಟ್ಟಿರುವುದಕ್ಕೆ ಈ ಬಾರಿ ಲೋಕಸಭೆ ಟಿಕೆಟ್ ಕೊಡಿಸಲು ಸಿಎಂ ಮುಂದಾಗಿದ್ದರು ಎನ್ನಲಾಗಿದೆ. ಆದರೆ ಹೈಕಮಾಂಡ್ ವಿಧಾನಸಭೆ ಚುನಾವಣೆ ವೇಳೆ ಮಾಡಿದ ವಾಗ್ದಾನ ಮತ್ತು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರವನ್ನು ಈ ಬಾರಿ ಹೇಗಾದರೂ ಗೆಲ್ಲಲ್ಲೇ ಬೇಕೆನ್ನುವ ಹಠದ ಹಿನ್ನೆಲೆಯಲ್ಲಿ ಸಚ್ಚಾರಿತ್ಯದ ಹೊಸ ಮುಖ ಅನಿವಾರ್ಯ ಎಂದು ಮನಗಂಡಿದೆ. ಈ ಹಿನ್ನೆಲೆಯಲ್ಲಿ ಪದ್ಮರಾಜ್ ಅವರಿಗೆ ಟಿಕೆಟ್ ಗ್ಯಾರಂಟಿ ಎನ್ನಲಾಗಿದೆ. ಅದಲ್ಲದೆ ಪದ್ಮರಾಜ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಜನಸಂಖ್ಯೆಯನ್ನು ಹೊಂದಿದ ಬಿಲ್ಲವ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು