ಇತ್ತೀಚಿನ ಸುದ್ದಿ
ಪ್ರಧಾನಿ ಕೈ ಬಲಪಡಿಸೋಣ; ಸಾಮಾನ್ಯ ಕಾರ್ಯಕರ್ತನಾದ ನನಗೆ ಈ ಅವಕಾಶ ಸಿಕ್ಕಿರುವುದು ಸಂಭ್ರಮದ ಕ್ಷಣ: ಕ್ಯಾಪ್ಟನ್ ಬ್ರಿಜೇಶ್ ಚೌಟ
16/03/2024, 01:02

ಮಂಗಳೂರು(reporterkarnataka.com): ಸಾಮಾನ್ಯ ಕಾರ್ಯಕರ್ತನಿಗೆ ಈ ಅವಕಾಶ ಸಿಕ್ಕಿರುವುದು ಸಂಭ್ರಮದ ಕ್ಷಣ. ಹಿಂದೂತ್ವ ಹಾಗೂ ಅಭಿವೃದ್ಧಿಯನ್ನು ಮುಂದಿಟ್ಟು ಎಲ್ಲರೂ ಒಟ್ಟಾಗಿ ಒಂದಾಗಿ ಶ್ರಮಿಸಿ ಪ್ರಧಾನಿ
ಮೋದಿ ಅವರ ಕೈ ಬಲ ಪಡಿಸೋಣ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಅಭ್ಯರ್ಥಿಯಾಗಿ ಆಯ್ಕೆ ಬಳಿಕ ಶುಕ್ರವಾರ ಜಿಲ್ಲಾ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
ವಿಭಾಗ ಪ್ರಭಾರಿ ಶ್ರೀ ಉದಯ್ ಕುಮಾರ್ ಶೆಟ್ಟಿ ಅವರು ಮುಂದೆ ನಡೆಯುವ ಚುನಾವಣೆ ಯಲ್ಲಿ ಭರ್ಜರಿ ಬಹುಮತ ದೊಂದಿಗೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಎಲ್ಲರೂ ಒಟ್ಟಾಗಿ ಗೆಲ್ಲುವ ಹಾಗೆ ಶ್ರಮಿಸಬೇಕು ಎಂದು ನುಡಿದರು.
ಜಿಲ್ಲಾ ಉಪಾದ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಚುನಾವಣಾ ಸಂಚಾಲಕ ನಿತಿನ್ ಕುಮಾರ್,ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ , ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮೋರ್ಚಾ ಅಧ್ಯಕ್ಷ,ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತ ರಿದ್ದರು .