5:50 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ನಂಜನಗೂಡು: ಹಳ್ಳಿ ಸೊಗಡಿನ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ; ಕಲಾ ರಸಿಕರು ಫುಲ್ ಖುಷಿ

16/03/2024, 19:23

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ನೆಲತಾಳಪುರ ಗ್ರಾಮದಲ್ಲಿ ಶ್ರೀ ಚಿಕ್ಕದೇವಮ್ಮನವರ ಹಬ್ಬದ ಪ್ರಯುಕ್ತ ಕುರುಕ್ಷೇತ್ರ ಅಥವಾ ಧರ್ಮರಾಜ ಸ್ಥಾಪನೆ ಎಂಬ ಪೌರಾಣಿಕ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.


ಗ್ರಾಮದ ಧರೆಗೆ ದೊಡ್ಡವರು ಮತ್ತು ಶ್ರೀ ಚಿಕ್ಕದೇವಮ್ಮನವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಹೆಸರಾಂತ ಉಮೇಶ್ ಡ್ರಾಮಾ ಸೀನರಿ ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತವಾದ ಭವ್ಯ ರಂಗ ಮಂಟಪದಲ್ಲಿ ನಾಟಕ ಪ್ರದರ್ಶನ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಿಕ್ಕರಂಗನಾಯಕ ಹಾಗೂ ಮತ್ತಿತರರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಅವರು ಮಾತನಾಡಿ ಇಂದಿನ ಆಧುನಿಕತೆ ಸಿನಿಮಾ ರಂಗದ ನಡುವೆಯೂ ನಾಟಕ ರಂಗಭೂಮಿ ಉಳಿದಿರುವುದು ಹಳ್ಳಿಗಾಡಿನಲ್ಲಿ ಮಾತ್ರ. ಸಿನಿಮಾ ರಂಗದ ದಿಗ್ಗಜ ಡಾ. ರಾಜಕುಮಾರ್ ಕೂಡ ರಂಗಭೂಮಿಯಿಂದಲೇ ಬಂದವರು ಎಂದು ನಾಟಕ ರಂಗಭೂಮಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ನಾಟಕದಲ್ಲಿ ಒಳ್ಳೆಯ ಹಾಗೂ ಕೆಟ್ಟ ಸನ್ನಿವೇಶಗಳು ಮತ್ತು ಪಾತ್ರಗಳು ಬರುತ್ತವೆ. ಪ್ರೇಕ್ಷಕರಾದ ತಾವು ಕೆಟ್ಟದ್ದನ್ನು ಬದಿಗೊತ್ತಿ ಒಳ್ಳೆಯದನ್ನು ಮಾತ್ರ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರನ್ನು ನಾಟಕ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನಂತರ ನಡೆದ ನಾಟಕ ಪ್ರದರ್ಶನದಲ್ಲಿ ಶ್ರೀ ಕೃಷ್ಣ, ಅರ್ಜುನ ಹಾಗೂ ಅಭಿಮನ್ಯು ಪಾತ್ರಧಾರಿಗಳು ಉತ್ತಮ ನಟನೆ ಮಾಡುವ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆಂಪಮ್ಮ ತೋಪನಾಯ್ಕ, ಸದಸ್ಯರಾದ ಶಶಿಕಲಾಪ್ರಭುಸ್ವಾಮಿ, ರಾಜೇಂದ್ರ, ನಂಜನಗೂಡು ನಗರ ಘಟಕದ ಬಿಜೆಪಿ ಅಧ್ಯಕ್ಷ ಹರ್ಷಿತ್ ಕುಮಾರ್, ಮುಖಂಡರುಗಳಾದ ರಾಮಶೆಟ್ಟಿ, ನಾಗೇಶ್, ಮಹೇಶ್ ಸೇರಿದಂತೆ ಗ್ರಾಮದ ಯಜಮಾನ್ರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು