12:36 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಈಶ್ವರಪ್ಪ ಅಸಮಾಧಾನ ಎರಡು ದಿನಗಳಲ್ಲಿ ಪರಿಹಾರ: ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ

16/03/2024, 19:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆ.ಎಸ್. ಈಶ್ವರಪ್ಪ ಹಿರಿಯ ನಾಯಕರು. ಟಿಕೆಟ್ ಸಂಬಂಧಿಸಿದಂತೆ ಎದ್ದರುವ ಅಸಮಾಧಾನ ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರವಾಗಿ ಅವರು ಚಿಕ್ಕಮಗಳೂರಿನಲ್ಲಿ ಮಾತನಾಡಿದರು.
ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ ಅವರು,ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸುತ್ತಾರೆ.
ಗೊಂದಲಗಳು ಬಗೆಹರಿಯುತ್ತೆ ಎಂಬ ವಿಶ್ವಾಸ ಇದೆ. ಚರ್ಚೆಗೆ ಅವಕಾಶವಾಗಿರುವುದು ಸತ್ಯ.
ಹಾವೇರಿ ಟಿಕೆಟ್ ಕಾಂತೇಶ್ ಗೆ ನೀಡಬೇಕಿತ್ತು ಎಂಬುವುದು ಈಶ್ವರಪ್ಪನವರ ಬಯಕೆಯಾಗಿತ್ತು. ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ. ಎಲ್ಲವನ್ನು ಸಮನ್ವಯವಾಗಿಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿ. ಪಾರ್ಟಿ ತೀರ್ಮಾನ ತೆಗೆದುಕೊಳ್ಳುವಾಗ ವ್ಯತ್ಯಾಸವಾಗಿರ ಬಹುದು. ಈ ಸಮಸ್ಯೆಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಕೋಟ ಶ್ರೀನಿವಾಸ ಪೂಜಾರಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು