7:56 AM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಈಶ್ವರಪ್ಪ ಅಸಮಾಧಾನ ಎರಡು ದಿನಗಳಲ್ಲಿ ಪರಿಹಾರ: ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ

16/03/2024, 19:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆ.ಎಸ್. ಈಶ್ವರಪ್ಪ ಹಿರಿಯ ನಾಯಕರು. ಟಿಕೆಟ್ ಸಂಬಂಧಿಸಿದಂತೆ ಎದ್ದರುವ ಅಸಮಾಧಾನ ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರವಾಗಿ ಅವರು ಚಿಕ್ಕಮಗಳೂರಿನಲ್ಲಿ ಮಾತನಾಡಿದರು.
ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ ಅವರು,ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸುತ್ತಾರೆ.
ಗೊಂದಲಗಳು ಬಗೆಹರಿಯುತ್ತೆ ಎಂಬ ವಿಶ್ವಾಸ ಇದೆ. ಚರ್ಚೆಗೆ ಅವಕಾಶವಾಗಿರುವುದು ಸತ್ಯ.
ಹಾವೇರಿ ಟಿಕೆಟ್ ಕಾಂತೇಶ್ ಗೆ ನೀಡಬೇಕಿತ್ತು ಎಂಬುವುದು ಈಶ್ವರಪ್ಪನವರ ಬಯಕೆಯಾಗಿತ್ತು. ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ. ಎಲ್ಲವನ್ನು ಸಮನ್ವಯವಾಗಿಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿ. ಪಾರ್ಟಿ ತೀರ್ಮಾನ ತೆಗೆದುಕೊಳ್ಳುವಾಗ ವ್ಯತ್ಯಾಸವಾಗಿರ ಬಹುದು. ಈ ಸಮಸ್ಯೆಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಕೋಟ ಶ್ರೀನಿವಾಸ ಪೂಜಾರಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು