2:10 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿಯಾದದ್ದು ನನ್ನ ಸೌಭಾಗ್ಯ; ಶ್ರೀಕೃಷ್ಣನ ಆಶೀರ್ವಾದಿಂದ ಮುಖ್ಯಮಂತ್ರಿಯಾಗಿದ್ದೇನೆ: ಬೊಮ್ಮಾಯಿ

12/08/2021, 19:46

ಉಡುಪಿ(reporterkarnataka.com): ಎರಡು ವರ್ಷಗಳ ಕಾಲ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಸೌಭಾಗ್ಯ. ನಾನು ಗ್ರಹಿಸದ, ಎಣಿಸದ, ನಾನು ಬಯಸದ ಮುಖ್ಯಮಂತ್ರಿ ಹುದ್ದೆ ಸಿಕ್ಕಿದೆ. ಎಲ್ಲವೂ ದೈವೇಚ್ಛೆ ಹಾಗೂ ಶ್ರೀಕೃಷ್ಣ ಪರಮಾತ್ಮನ ಆಶೀರ್ವಾದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಆರೋಗ್ಯ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಗೆ ಉತ್ತರ ಕನ್ನಡ ಕಡೆಯಿಂದ ತುಂಬಾ ಜನರು ಬರುತ್ತಿದ್ದಾರೆ. ಸರಕಾರದ ಕಡೆಯಿಂದ ಆಸ್ಪತ್ರೆಯ ಅವಶ್ಯಕತೆ ಇದೆ. ಉಡುಪಿ ಜಿಲ್ಲೆಯಲ್ಲಿಯೂ ಜನಸಂಖ್ಯೆ ಹೆಚ್ಚಾಗುತ್ತಿದೆ. ಜನರ ಆಶೋತ್ತರಗಳು ಕೂಡ ಹೆಚ್ಚುತ್ತಿದೆ. ಜನರ ಆಶೋತ್ತರ ಈಡೇರಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ಜನರ ಪ್ರಾಣ ರಕ್ಷಣೆ ಸರಕಾರದ ಆದ್ಯ ಕರ್ತವ್ಯ ಎಂದು ಅವರು ನುಡಿದರು.

ಸಚಿವರಾದ ಡಾ.ಕೆ. ಸುಧಾಕರ್, ಸುನಿಲ್ ಕುಮಾರ್, ಶಾಸಕ ಕೆ. ರಘುಪತಿಭಟ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು