2:45 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿಯಾದದ್ದು ನನ್ನ ಸೌಭಾಗ್ಯ; ಶ್ರೀಕೃಷ್ಣನ ಆಶೀರ್ವಾದಿಂದ ಮುಖ್ಯಮಂತ್ರಿಯಾಗಿದ್ದೇನೆ: ಬೊಮ್ಮಾಯಿ

12/08/2021, 19:46

ಉಡುಪಿ(reporterkarnataka.com): ಎರಡು ವರ್ಷಗಳ ಕಾಲ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಸೌಭಾಗ್ಯ. ನಾನು ಗ್ರಹಿಸದ, ಎಣಿಸದ, ನಾನು ಬಯಸದ ಮುಖ್ಯಮಂತ್ರಿ ಹುದ್ದೆ ಸಿಕ್ಕಿದೆ. ಎಲ್ಲವೂ ದೈವೇಚ್ಛೆ ಹಾಗೂ ಶ್ರೀಕೃಷ್ಣ ಪರಮಾತ್ಮನ ಆಶೀರ್ವಾದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಆರೋಗ್ಯ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಗೆ ಉತ್ತರ ಕನ್ನಡ ಕಡೆಯಿಂದ ತುಂಬಾ ಜನರು ಬರುತ್ತಿದ್ದಾರೆ. ಸರಕಾರದ ಕಡೆಯಿಂದ ಆಸ್ಪತ್ರೆಯ ಅವಶ್ಯಕತೆ ಇದೆ. ಉಡುಪಿ ಜಿಲ್ಲೆಯಲ್ಲಿಯೂ ಜನಸಂಖ್ಯೆ ಹೆಚ್ಚಾಗುತ್ತಿದೆ. ಜನರ ಆಶೋತ್ತರಗಳು ಕೂಡ ಹೆಚ್ಚುತ್ತಿದೆ. ಜನರ ಆಶೋತ್ತರ ಈಡೇರಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ಜನರ ಪ್ರಾಣ ರಕ್ಷಣೆ ಸರಕಾರದ ಆದ್ಯ ಕರ್ತವ್ಯ ಎಂದು ಅವರು ನುಡಿದರು.

ಸಚಿವರಾದ ಡಾ.ಕೆ. ಸುಧಾಕರ್, ಸುನಿಲ್ ಕುಮಾರ್, ಶಾಸಕ ಕೆ. ರಘುಪತಿಭಟ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು