2:59 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿಯಾದದ್ದು ನನ್ನ ಸೌಭಾಗ್ಯ; ಶ್ರೀಕೃಷ್ಣನ ಆಶೀರ್ವಾದಿಂದ ಮುಖ್ಯಮಂತ್ರಿಯಾಗಿದ್ದೇನೆ: ಬೊಮ್ಮಾಯಿ

12/08/2021, 19:46

ಉಡುಪಿ(reporterkarnataka.com): ಎರಡು ವರ್ಷಗಳ ಕಾಲ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಸೌಭಾಗ್ಯ. ನಾನು ಗ್ರಹಿಸದ, ಎಣಿಸದ, ನಾನು ಬಯಸದ ಮುಖ್ಯಮಂತ್ರಿ ಹುದ್ದೆ ಸಿಕ್ಕಿದೆ. ಎಲ್ಲವೂ ದೈವೇಚ್ಛೆ ಹಾಗೂ ಶ್ರೀಕೃಷ್ಣ ಪರಮಾತ್ಮನ ಆಶೀರ್ವಾದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಆರೋಗ್ಯ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಗೆ ಉತ್ತರ ಕನ್ನಡ ಕಡೆಯಿಂದ ತುಂಬಾ ಜನರು ಬರುತ್ತಿದ್ದಾರೆ. ಸರಕಾರದ ಕಡೆಯಿಂದ ಆಸ್ಪತ್ರೆಯ ಅವಶ್ಯಕತೆ ಇದೆ. ಉಡುಪಿ ಜಿಲ್ಲೆಯಲ್ಲಿಯೂ ಜನಸಂಖ್ಯೆ ಹೆಚ್ಚಾಗುತ್ತಿದೆ. ಜನರ ಆಶೋತ್ತರಗಳು ಕೂಡ ಹೆಚ್ಚುತ್ತಿದೆ. ಜನರ ಆಶೋತ್ತರ ಈಡೇರಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ಜನರ ಪ್ರಾಣ ರಕ್ಷಣೆ ಸರಕಾರದ ಆದ್ಯ ಕರ್ತವ್ಯ ಎಂದು ಅವರು ನುಡಿದರು.

ಸಚಿವರಾದ ಡಾ.ಕೆ. ಸುಧಾಕರ್, ಸುನಿಲ್ ಕುಮಾರ್, ಶಾಸಕ ಕೆ. ರಘುಪತಿಭಟ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು