4:03 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಪ್ರವೇಶ ನಿಷೇಧಿತ 16 ಚಕ್ರದ ಲಾರಿ: ಭಾರೀ ಟ್ರಾಫಿಕ್ ಜಾಮ್; ಮೈಲಿಗಟ್ಟಲೆ ವಾಹನಗಳ ಸಾಲು

18/03/2024, 11:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟಿಯಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಘಾಟಿ ರಸ್ತೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಹೊತ್ತ ಲಾರಿ ಇದಾಗಿದೆ. ವಾಸ್ತವದಲ್ಲಿ
10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವಂತಿಲ್ಲ. ಆದರೆ 16 ಚಕ್ರದ ಲಾರಿ ಘಾಟಿ ಹೇಗೆ ಪ್ರವೇಶಿಸಿತು ಎನ್ನುವುದು ಪ್ರಶ್ನೆ ಯಾಗಿದೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದರೂ ಲಾರಿಗೆ ಹೇಗೆ ಎಂಟ್ರಿ ನೀಡಲಾಯಿತು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ.
ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತಿರುವುದರಿಂದ ಇಂದು ಬೆಳಗ್ಗಿನಿಂದಲೂ ವಾಹನ ಸವಾರರು ಮುಂದೆಯೂ ಹೋಗಲಾಗದೆ, ಹಿಂದೆಯೂ ಬರಲಾಗದೆ ಪರದಾಡುತ್ತಿದ್ದಾರೆ.
ಪೊಲೀಸರು ವಾಹನ ಬಿಟ್ಟಿರುವುದಕ್ಕೆ ಸ್ಥಳೀಯರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು