10:32 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ: ಶಾಸಕ ಡಾ.ಭರತ್ ಶೆಟ್ಟಿ

18/03/2024, 20:25

ಅಡ್ಯಾರ್(reporterkarnataka.com): ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಮತ್ತು ವೃಕ್ಷರಾಜ ಫ್ರೆಂಡ್ಸ್ ಕ್ಲಬ್ ಗ್ರಾಮೀಣಾಭಿವೃದ್ಧಿ ಕೇಂದ್ರ ಅಡ್ಯಾರ್ ಪದವು ವತಿಯಿಂದ ಇದರ 22ನೇ ವಾರ್ಷಿಕೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಭಾನುವಾರ ವೃಕ್ಷರಾಜ ಸಭಾ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು.


ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ವೈ ಚಾಲನೆ ನೀಡಿ, ಯಾವುದೇ ಸಂಘಟನೆಗಳು ಸಮಾಜಕ್ಕೆ ನೆರವಾದಾಗ ,ಜನರ ಕಷ್ಟಗಳಿಗೆ ಸ್ಪಂದಿಸಿದಾಗ ಜನರ ವಿಶ್ವಾಸ, ಗೌರವಕ್ಕೆ ಪಾತ್ರವಾಗುತ್ತದೆ .ಸಮಾಜ ಸೇವೆಯ ಮೂಲಕ ಮನೆ ಮಾತಾದ ಸಂಘಟನೆಯು ಇದೀಗ ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಮಂಗಳೂರು ಉತ್ತರ ಮಂಡಲ ಯುವ ಮೋರ್ಚಾದ ಕಾರ್ಯದರ್ಶಿಗಳಾದ ಪ್ರಮೋದ್ , ಕೋಡ್ದಬ್ಬು ಪಂಜುರ್ಲಿ ದೈವಸ್ಥಾನದ ಮೋಹನ್ ಸಾಲ್ಯಾನ್ , ಕೋಟಿ ಗುರಿಕಾರ, ಜೈ ಆಂಜನೇಯ ರೈಸ್ಲಿಂಗ್ ಸೆಂಟರ್ ನ ಯೋಗ ಶಿಕ್ಷಕರಾದ ಸುಧೀರ್, ವಿಶ್ವ ಹಿಂದೂ ಪರಿಷತ್ ಬಜರಂಗದಳದ ಸಂಯೋಜಕ್ ಉಲ್ಲಾಸ್ , ವೆನ್ಲಾಕ್ ಆಸ್ಪತ್ರೆಯ ಆಂಟನಿ , ವೈದ್ಯರಾದ ಸೆಲ್ವಿ, ಸಂಸ್ಥೆಯ ಅಧ್ಯಕ್ಷ ಹರೀಶ್ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು