9:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಲೋಕಸಭಾ ಚುಣಾವಣೆ: ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ

19/03/2024, 12:52

ಮಂಗಳೂರು(reporterkarnataka.com): ಇದೀಗ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚನೆ ನೀಡಿದ್ದಾರೆ.


ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜಕೀಯ ಪಕ್ಷಗಳು, ಚುನಾವಣೆ ಸಂಬಂಧ ನಡೆಸಲಾಗುವ ಸಭೆ-ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳಿಗೆ, ವಾಹನ ಬಳಕೆಗಾಗಿ ಅನುಮತಿ ಪಡೆಯಲು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗಿರುವ ಏಕ ಗವಾಕ್ಷಿ ಪದ್ದತಿಯಡಿ ಅರ್ಜಿ ಸಲ್ಲಿಸಬೇಕು. ರಾಜಕೀಯ ಪಕ್ಷಗಳು ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಭಾರತ ಚುನಾವಣಾ ಆಯೋಗವು “ಸುವಿಧಾ ಆಪ್” ಪರಿಚಯಿಸಿದೆ, ಈ ಆಪ್ ಮೂಲಕವು ಅನುಮತಿ ಪಡೆಯಬಹುದಾಗಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ಮತ್ತು ವಾಹನ ಪರವಾನಿಗೆಗಾಗಿಯೂ ಅನುಮತಿ ಪಡೆಯಬೇಕು. ಸ್ಟಾರ್ ಪ್ರಚಾರಕರು ಹಾಗೂ ಪ್ರಚಾರ ಸ್ಥಳಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಮಾದರಿ ನೀತಿ ಸಂಹಿತೆಯು ಎಲ್ಲಾ ಪಕ್ಷಗಳು, ಅಭ್ಯರ್ಥಿಗಳಿಗೂ ಅನ್ವಯವಾಗಲಿದ್ದು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಯಮಗಳನ್ನು ಪಾಲನೆ ಮಾಡುವುದರಿಂದ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಚುನಾವಣೆ ನಡೆಸಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಸಹ ಸಹಕಾರ ನೀಡಬೇಕೆಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿಗಳಾದ ಡಾ. ಸಂತೋಷ್ ಕುಮಾರ್,‌ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು