9:36 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಲೋಕಸಭಾ ಚುನಾವಣೆ: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಚುನಾವಣಾ ಕಾರ್ಯನಿರ್ವಹಣಾ ತಂಡದ ಸಭೆ

20/03/2024, 11:17

ಮಂಗಳೂರು(reporterkarnataka.com): ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ “ಚುನಾವಣಾ ಕಾರ್ಯನಿರ್ವಹಣಾ ತಂಡ”ದ ಸಭೆಯು ನಗರದ ಅಟಲ್‌ ಸೇವಾ ಕೇಂದ್ರದಲ್ಲಿ ನಡೆಯಿತು.


ಕಾರ್ಯನಿರ್ವಹಣಾ ತಂಡದ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್‌ ಕಾಮತ್‌ ಅವರು, ಭಾರತದ ಹೆಮ್ಮೆಯ ಪ್ರಧಾನಿಯಾದ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಈ ಬಾರಿ ಬಿಜೆಪಿಯು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಶತಃ ಸಿದ್ಧವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್‌ ಚೌಟ ಅವರನ್ನು ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಲು ಮಂಗಳೂರು ದಕ್ಷಿಣ ಕ್ಷೇತ್ರದಿಂದ 40,000 ಕ್ಕೂ ಹೆಚ್ಚಿನ ಮತಗಳ ಮುನ್ನಡೆ ದೊರಕಿಸಿ ಕೊಡುವುದು ನಮ್ಮೆಲ್ಲರ ಜವಾಬ್ದಾರಿ. ಹಾಗಾಗಿ ಮುಂದಿನ 35ರಿಂದ 40 ದಿನಗಳ ಕಾಲ ಪಕ್ಷಕ್ಕಾಗಿ ಸಂಪೂರ್ಣ ಸಮಯ ಕೊಡುವ ಮೂಲಕ ಈಗಿನಿಂದಲೇ ಕಾರ್ಯೋನ್ಮುಖರಾಗೋಣವೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಪ್ರಸಾದ್‌ ಕುಮಾರ್‌, ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷರಾದ ರಮೇಶ್‌ ಕಂಡೆಟ್ಟು, ಜಿಲ್ಲಾ ಉಪಾಧ್ಯಕ್ಷರು ಹಾಗೂ ಮಂಡಲದ ಚುನಾವಣಾ ಪ್ರಭಾರಿಗಳಾದ ರಾಕೇಶ್‌ ರೈ, ಲೋಕಸಭಾ ಚುನಾವಣಾ ಮಂಡಲ ಪ್ರಭಾರಿಗಳಾದ ರವಿಶಂಕರ್‌ ಮಿಜಾರ್‌, ಲೋಕಸಭಾ ಚುನಾವಣಾ ಮಂಡಲ ಸಂಚಾಲಕರಾದ ವಿಜಯ್‌ ಕುಮಾರ್‌ ಶೆಟ್ಟಿ, ಮಾಜಿ ಸಚಿವರಾದ ನಾಗರಾಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್‌ ಕುಮಾರ್‌ ಹಾಗೂ ರಮೇಶ್‌ ಹೆಗ್ಡೆ ಸೇರಿದಂತೆ ಚುನಾವಣಾ ಕಾರ್ಯನಿರ್ವಹಣಾ ತಂಡದ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು