9:26 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಲೋಕಸಭಾ ಚುನಾವಣೆ: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಚುನಾವಣಾ ಕಾರ್ಯನಿರ್ವಹಣಾ ತಂಡದ ಸಭೆ

20/03/2024, 11:17

ಮಂಗಳೂರು(reporterkarnataka.com): ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ “ಚುನಾವಣಾ ಕಾರ್ಯನಿರ್ವಹಣಾ ತಂಡ”ದ ಸಭೆಯು ನಗರದ ಅಟಲ್‌ ಸೇವಾ ಕೇಂದ್ರದಲ್ಲಿ ನಡೆಯಿತು.


ಕಾರ್ಯನಿರ್ವಹಣಾ ತಂಡದ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್‌ ಕಾಮತ್‌ ಅವರು, ಭಾರತದ ಹೆಮ್ಮೆಯ ಪ್ರಧಾನಿಯಾದ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಈ ಬಾರಿ ಬಿಜೆಪಿಯು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಶತಃ ಸಿದ್ಧವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್‌ ಚೌಟ ಅವರನ್ನು ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಲು ಮಂಗಳೂರು ದಕ್ಷಿಣ ಕ್ಷೇತ್ರದಿಂದ 40,000 ಕ್ಕೂ ಹೆಚ್ಚಿನ ಮತಗಳ ಮುನ್ನಡೆ ದೊರಕಿಸಿ ಕೊಡುವುದು ನಮ್ಮೆಲ್ಲರ ಜವಾಬ್ದಾರಿ. ಹಾಗಾಗಿ ಮುಂದಿನ 35ರಿಂದ 40 ದಿನಗಳ ಕಾಲ ಪಕ್ಷಕ್ಕಾಗಿ ಸಂಪೂರ್ಣ ಸಮಯ ಕೊಡುವ ಮೂಲಕ ಈಗಿನಿಂದಲೇ ಕಾರ್ಯೋನ್ಮುಖರಾಗೋಣವೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಪ್ರಸಾದ್‌ ಕುಮಾರ್‌, ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷರಾದ ರಮೇಶ್‌ ಕಂಡೆಟ್ಟು, ಜಿಲ್ಲಾ ಉಪಾಧ್ಯಕ್ಷರು ಹಾಗೂ ಮಂಡಲದ ಚುನಾವಣಾ ಪ್ರಭಾರಿಗಳಾದ ರಾಕೇಶ್‌ ರೈ, ಲೋಕಸಭಾ ಚುನಾವಣಾ ಮಂಡಲ ಪ್ರಭಾರಿಗಳಾದ ರವಿಶಂಕರ್‌ ಮಿಜಾರ್‌, ಲೋಕಸಭಾ ಚುನಾವಣಾ ಮಂಡಲ ಸಂಚಾಲಕರಾದ ವಿಜಯ್‌ ಕುಮಾರ್‌ ಶೆಟ್ಟಿ, ಮಾಜಿ ಸಚಿವರಾದ ನಾಗರಾಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್‌ ಕುಮಾರ್‌ ಹಾಗೂ ರಮೇಶ್‌ ಹೆಗ್ಡೆ ಸೇರಿದಂತೆ ಚುನಾವಣಾ ಕಾರ್ಯನಿರ್ವಹಣಾ ತಂಡದ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು