3:17 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಮತ್ತೊಮ್ಮೆ ಸೆಂಟ್ ಫ್ಯಾಕ್ಟರಿಯಲ್ಲಿ ಬೆಂಕಿ : ಹೊಗೆಮಯ ವಾತಾವರಣಕ್ಕೆ ಬೆಚ್ಚಿದ ಸ್ಥಳೀಯರು

12/08/2021, 20:44

ಬಜಪೆ(reporterkarnataka.com)
ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸಮೀಪದ ಎಸ್‌ಇಝಡ್‌ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಗುರುವಾರ ಮತ್ತೊಮ್ಮೆ ಬೆಂಕಿ ಅವಘಡ ಸಂಭವಿಸಿದೆ


ಭಾರೀ ಪ್ರಮಾಣದ ಹೊಗೆ ಹರಡಿಕೊಂಡು ಸ್ಥಳೀಯರು ಭಯಭೀತರಾದ ಘಟನೆ ನೆಲ್ಲಿದಡಿಯಲ್ಲಿ ಇರುವ ಈ ಫ್ಯಾಕ್ಟರಿಯಲ್ಲಿ ನಡೆದಿದೆ.

ಕಳೆದ ಎಪ್ರಿಲ್‌ಲಲ್ಲಿ ಕೂಡ ಇದೇ ಕಂಪೆನಿಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ಬಗ್ಗೆ ದುರಸ್ತಿ ಕಾರ್ಯ ನಡೆಯುತ್ತಿತ್ತು ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಈ ರೀತಿಯಾಗಿ ಬೆಂಕಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಘಟನೆಯ ಬಗ್ಗೆ ಸಂಸ್ಥೆಯವರು ಖಚಿತ ಮಾಹಿತಿ ನೀಡಿಲ್ಲ. ಗುರುವಾರವು ಈ ಘಟಕದಲ್ಲಿ ಉದ್ಯೋಗಿಗಳ ಸಂಖ್ಯೆ ಕಡಿಮೆ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ.

ಮಂಗಳೂರು ಕದ್ರಿ ಅಗ್ನಿಶಾಮಕ ದಳ, ಎಚ್‌ಪಿಸಿಎಲ್, ಎನ್‌ಎಂಪಿಟಿ ಸಿಬ್ಬಂದಿ ವರ್ಗ ಬೆಂಕಿ ನಂದಿಸಿದರು.
ಘಟನಾ ಸ್ಥಳಕ್ಕೆ ಬಜೈ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು