11:43 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಕೋವಿಡ್ 3ನೇ ಅಲೆ ಬರುವ ಮುನ್ನ ಅಗತ್ಯ ಮುನ್ನೆಚ್ಚರಿಕೆ ವಹಿಸಿ:  ಸಚಿವ ಮುನಿರತ್ನ ಸೂಚನೆ

13/08/2021, 09:34

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ಹತ್ತು ದಿನಗಳೊಳಗಾಗಿ ಕೊವಿಡ್ ವಾರ್ ರೂಂನ್ನು ನಿರ್ಮಿಸಿ ಮಕ್ಕಳಲ್ಲಿ ಯಾವುದೇ ಚಿಕಿತ್ಸೆ ತೊಂದರೆ ಯಾಗದಂತೆ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಹಾಸಿಗೆಗಳ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ತೋಟಗಾರಿಕೆ , ಯೋಜನೆ ಮತ್ತು ಸ್ಯಾಂಖಿಕ ಸಚಿವ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.

ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ನಡೆಸಿ ಮಾತನಾಡಿದ ಅವರು , 3ನೇ ಅಲೆಯಿಂದ ಸಂಕಷ್ಟಕ್ಕಿಡಾಗದೆ ಐಸಿಯು ಹಾಸಿಗೆಗಳು , ವೆಂಟಿಲೇಟರ್ , ಪೈಪ್ ಲೈನ್ ಆಕ್ಸಿಜನ್ ಮತ್ತಿತರ ಸೌಲಭ್ಯಗಳ ಬಗ್ಗೆ ಅವರು ಪರಿಶೀಲನೆ ಮಾಡಿ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಆಸ್ಪತ್ರೆ ಹಾಗೂ ಕೋವಿಡ್ ವಾರ್ ರೂಂನಲ್ಲಿರುವ ಕೊರತೆ ಮತ್ತು ಆಸ್ಪತ್ರೆಗಳಲ್ಲಿರುವ ಕೊರತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಕೋವಿಡ್ ಸಂಭಾವ್ಯ 3ನೇ ಅಲೆ ಬರುವ ಮುನ್ನವೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು , ಮಕ್ಕಳ ಆರೋಗ್ಯವನ್ನು ಕಾಪಾಡುವ ಬಗ್ಗೆ ವಿಶೇಷ ಗಮನ ಹರಿಸಬೇಕು. ಮಕ್ಕಳಿಗೆ ಪಾಸಿಟಿವ್ ಬಂದ ತಕ್ಷಣ ಚಿಕಿತ್ಸೆ ಪ್ರಾರಂಭ ಮಾಡಿ ವೇಗವಾಗಿ ಕೋವಿಡ್ ನಿಯಂತ್ರಣ ಮಾಡಲಾಗುವುದು ಎಂದು ಅವರು ತಿಳಿಸಿದರು. 

ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆಸ್ಪತ್ರೆಗಳಲ್ಲಿ 3 ನೇ ಅಲೆಯನ್ನು ನಿಯಂತ್ರಣ ಮಾಡಲು ಬೇಕಾದ ಎಲ್ಲಾ ಸಲಕರಣೆಗಳನ್ನು ಒದಗಿಸುವುದು . ಕೋವಿಡ್ 3 ನೇ ಅಲೆಯಲ್ಲಿ ತಜ್ಞರ ವರದಿ ಪ್ರಕಾರ ಮಕ್ಕಳ ಮೇಲೆ ಎಷ್ಟು ಪರಿಣಾಮ ಬೀರುತ್ತದೆ . ಆ ಮಕ್ಕಳ ಮೇಲೆ ಪರಿಣಾಮ ಬೀರದಿರುವುದಕ್ಕೆ ನೀವು ಏನು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿರಾ . ಎಷ್ಟು ಮಕ್ಕಳಿಗೆ ಬೆಡ್‌ಗಳ ವ್ಯವಸ್ಥೆ ಇದೆ ಎಂದು ಆರೋಗ್ಯ ಅಧಿಕಾರಿಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು , ಆಸ್ಪತ್ರೆಯಲ್ಲಿ ಸಂಪೂರ್ಣವಾಗಿ ಆಸಕ್ತಿ ವಹಿಸಿ ಕೆಲಸ ನಿರ್ವಹಿಸಬೇಕು . ನಾವು ಮಾಡುವ ಕೆಲಸ ಜನರ ಜೀವನವನ್ನು ಕೆಲಸವಾಗಬೇಕು ತಿಳಿಸಿದರು. 

ಆಸ್ಪತ್ರೆಯ ಸಿಬ್ಬಂದಿಗಳ ಮತ್ತು ಔಷಧಿ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ನಿರಂತರ ನಿಗಾ ವಹಿಸಬೇಕು . ಈಗ ಇರುವ 100 ಹಾಸಿಗಳ ಜೊತೆಗೆ 25 ಹಾಸಿಗೆಳ ಬೆಡ್‌ಗಳನ್ನು ಹೆಚ್ಚಿಸಲಾಗುವುದು . ಮಕ್ಕಳಿಗಾಗಿ 5 ವೆಂಟಿಲೇಟರ್ , ವಯಸ್ಕರ 5 ವೆಂಟಿಲೇಟರ್‌ಗಳ ಪೈಪ್ ಲೈನ್‌ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು . ಈ ಸಂದರ್ಭದಲ್ಲಿ ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ , ಜಿಲ್ಲಾಧಿಕಾರಿ ಡಾ . ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ ಶ್ರೀನಿವಾಸ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ ವೇಣುಗೋಪಾಲ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್  ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು