10:00 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಶಾಂತಿಯುತ ಲೋಕಸಭೆ ಎಲೆಕ್ಷನ್: ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ 10 ಮಂದಿ ಗಡಿಪಾರು

22/03/2024, 00:18

ಮಂಗಳೂರು(reporterkarnataka.com): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತೆ 10 ಮಂದಿಯನ್ನು ಗಡಿಪಾರು ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಗಡಿಪಾರು ಆದವರ ಸಂಖ್ಯೆ 26ಕ್ಕೇರಿದೆ.
ಹಲ್ಲೆ, ದೊಂಬಿ, ಅಶಾಂತಿ ಸೃಷ್ಟಿ,ಕ್ರಿಮಿನಲ್‌ ಸಂಚು ಹೂಡುವಿಕೆ, ಕೊಲೆ ಯತ್ನ ಇತ್ಯಾದಿ ಪ್ರಕರಣಗಳನ್ನು ಹೊಂದಿರುವ ಆರೋಪಿಗಳನ್ನು ಗಡೀಪಾರು ಮಾಡಲಾಗಿದೆ. ಕಸಬಾ ಬೆಂಗ್ರೆಯ ಮೊಹಮ್ಮದ್‌ ಸುಹೈಲ್‌ (21), ಕಣ್ಣೂರು ಕೊಡಕ್ಕಲ್‌ನ ನಿಕ್ಷಿತ್‌ ಪೂಜಾರಿ (21), ಉಳ್ಳಾಲ ಸೋಮೇಶ್ವರದ ಸುನಿಲ್‌ (24), ಉಳ್ಳಾಲ ಬಸ್ತಿಪಡುವಿನ ಯತೀಶ್‌ (46), ಮೂಲ್ಕಿ ಕಾರ್ನಾಡು ಬಿಜಾಪುರ ಕಾಲನಿಯ ಧರ್ಮಲಿಂಗ (34), ಕಣ್ಣೂರಿನ ಮೊಹಮ್ಮದ್‌ ಹನೀಜ್‌ (32), ಮೂಲ್ಕಿ ಚಿತ್ರಾಪುರದ ತೇಜಪಾಲ್‌ ಆರ್‌. ಕುಕ್ಯಾನ್‌ (40), ವಾಮಂಜೂರು ಉಳಾçಬೆಟ್ಟು ಮೊಹಮ್ಮದ್‌ ಅನ್ಸಾರ್‌ (31), ಪಾಂಡೇಶ್ವರ ಶಿವನಗರದ ಅಭಿಷೇಕ್‌ (29) ಎಂಬವರನ್ನು ಗಡೀಪಾರು ಮಾಡಲಾಗಿದೆ. ಇದುವರೆಗೆ 26 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಶಾಂತಿಯುತ ಚುನಾವಣೆ ನಡೆಯುವುದಕ್ಕಾಗಿ ಇವರೆಲ್ಲರನ್ನೂ ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಲಾಗಿದೆ. ಅಲ್ಲದೆ ಶಾಂತಿಕಾಪಾಡುವುದು, ಉತ್ತಮ ವರ್ತನೆಗಾಗಿ 381 ಮಂದಿಯಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು