8:27 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ಸಿದ್ಧಿ ಸಮುದಾಯದ ನಾಯಕ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಡಿಯಾಗೋ ಇನ್ನಿಲ್ಲ

13/08/2021, 10:46

ಕಾರವಾರ(reporterkarnataka.com):

ಸಿದ್ಧಿ ಸಮುದಾಯದ ನಾಯಕ, ಹೋರಾಟಗಾರ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಯಲ್ಲಾಪುರ ತೊಟ್ಟಿಲ್ಗುಂಡಿಯ ( ಹಳಿಯಾಳ ) ಡಿಯಾಗೋ ಬಸ್ತ್ಯಾವ್ ಸಿದ್ಧಿ ನಿಧನರಾಗಿದ್ದಾರೆ.

ಡಿಯಾಗೋ ಅವರು ತನ್ನ ಬದುಕಿನ ಪೂರ್ತಿ ಸಿದ್ಧಿ ಸಮುದಾಯದ ವಿಕಸನ, ಪಶ್ಚಿಮ ಘಟ್ಟ ಸಂರಕ್ಷಣೆ, ಸಮಾಜ ಸುಧಾರಣೆ ಬಗ್ಗೆ ಹೋರಾಟ ನಡೆಸಿದ್ದಾರೆ.

ತನ್ನ ವೈಯಕ್ತಿಕ ಬದುಕಿನ ಬಗ್ಗೆ ಚಿಂತಿಸದೇ ತನ್ನ ಸಮುದಾಯದ ಮತ್ತು ಸಮಾಜ, ಪ್ರಕೃತಿ ಸಂರಕ್ಷಣೆಯ ಬಗ್ಗೆ ಚಿಂತಿಸುತ್ತಾ ಮತ್ತು ಅದರ ಬಗ್ಗೆ ಕಾರ್ಯ ಪ್ರವೃತ್ತರಾಗಿ ಬಂದಿದ್ದಾರೆ. ಅವರು ಯಲ್ಲಾಪುರದಿಂದ ಆರಂಭಗೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೋರಾಟ ನಡೆಸಿದ್ದಾರೆ.

ಪರಿಸರ ಹೋರಾಟಗಾರ ದಿನೇಶ್ ಹೊಳ್ಳ ಅವರು ಡಿಯಾಗೋ ಅವರನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಅವರ ಹೋರಾಟದಲ್ಲಿ ನೇರವಾಗಿ ಪಾಲ್ಗೊಂಡ ಅನುಭವ ಹೊಂದಿದ್ದಾರೆ. ಡಿಯಾಗೋ ಅವರು ಇತ್ತೀಚೆಗೆ ಅನಾರೋಗ್ಯಪೀಡಿತರಾದ ಬಳಿಕವೂ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿ ಬಂದಿದ್ದಾರೆ.

ಡಿಯಾಗೋ ಅವರ ಸಾವಿನ ಸುದ್ದಿ ಕೇಳಿ ಸಹಿಸಲು ಬಹಳ ಕಷ್ಟವಾಯಿತು. ಅವರ ಹೋರಾಟದ ದಿನಗಳು, ಕೆಚ್ಚೆದಯ ಕ್ಷಣಗಳು , ಸಮುದಾಯದ ಏಳಿಗೆಯ ಬಗ್ಗೆ ಅವರು ತೆಗೆದುಕೊಂಡ ನಿರ್ಣಯಗಳು ನಮ್ಮನ್ನು ಯಾವಾಗಲೂ ಎಚ್ಚರಿಸುವಂತಿದೆ. ಅವರ ಕೊನೆಯ ಆಶೋತ್ತರಗಳನ್ನು ನೆರವೇರಿಸಲು ಪ್ರಯತ್ನ ಆಗಲೇ ಬೇಕಾದ ಅನಿವಾರ್ಯತೆ ಈಗ ನಮ್ಮ ಮುಂದೆ ಇದೆ. 

– ದಿನೇಶ್ ಹೊಳ್ಳ, ಪರಿಸರಪರ ಹೋರಾಟಗಾರ

ಇತ್ತೀಚಿನ ಸುದ್ದಿ

ಜಾಹೀರಾತು