8:22 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ನಾರಿ ಶಕ್ತಿ ಪಾತ್ರ ನಿರ್ಣಾಯಕ: ಶಾಸಕ ಡಾ.ಭರತ್ ಶೆಟ್ಟಿ

22/03/2024, 21:28

ಕಾವೂರು(reporterkarnataka.com): ಲೋಕಸಭಾ ಚುನಾವಣೆಯಲ್ಲಿ ನಾರಿ ಶಕ್ತಿ ನಿರ್ಣಾಯಕ. ದೇಶ ನಡೆಸುವ ಹಾಗೂ ಮನೆ ನಡೆಸುವ ಎರಡೂ ಜಾವಾಬ್ದಾರಿಯನ್ನು ಮಹಿಳೆಯರು ನಿಭಾಯಿಸ ಬಲ್ಲರು.ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಮಹಿಳಾ ಮೋರ್ಚಾವು ಶ್ರಮ ವಹಿಸಿದರೆ ಗೆಲುವು ನಿಶ್ಚಿತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.

ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ಮಂಡಲದ ಮಹಿಳಾ ಮೋರ್ಚಾದಿಂದ
ಏ. 26ರಂದು ನಡೆಯುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾವೂರಿನಲ್ಲಿ ನಡೆದ ಮಹಿಳಾ ಪ್ರಮುಖರ ಸಭೆಯಲ್ಲಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾದ ಅಧ್ಯಕ್ಷರಾದ ರೇಖಾ ರಾಜೇಶ್ ವಹಿಸಿಕೊಂಡರು. ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಮಂಜುಳಾ ರಾವ್ ಅವರು ಸಭೆಯನ್ನುದ್ದೇಶಿಸಿ ಸಮಯ ಪಾಲನೆ ಹಾಗೂ ಬೂತ್ ಮಟ್ಟದಲ್ಲಿ ಮಹಿಳೆಯರ ಸಂಘಟನೆ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಮಹಿಳೆಯರು ಯಾವ ರೀತಿ ತೊಡಗಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು
ಜಿಲ್ಲಾ ಮಹಿಳಾ ಚುನಾವಣಾ ಸಂಚಾಲಕರಾದ ಕಸ್ತೂರಿ ಪಂಜ ಅವರು ಚುನಾವಣೆಗೆ ಸಂಘಟನಾತ್ಮಕವಾಗಿ ಮಹಿಳೆಯರ ಒಗ್ಗೂಡುವಿಕೆ ಹಾಗೂ ಲೋಕಸಭಾ ಚುನಾವಣಾ ಪ್ರಕ್ರಿಯೆಯಲ್ಲಿ ನಮ್ಮೆಲರ ಜವಾಬ್ದಾರಿ ಏನು ಎಂಬುದನ್ನು ತಿಳಿಸಿದರು. ಧನಲಕ್ಷ್ಮಿಗಟ್ಟಿ ಅವರು ಸ್ವಸಹಾಯ ಸಂಘದವರನ್ನು ಸೇರಿಸಿ ಬೂತ್ ಮಟ್ಟದಲ್ಲಿ ಯಾವ ರೀತಿ ಕಾರ್ನರ್ ಬೈಟೆಕ್ ಗಳನ್ನು ಮಾಡುವುದು ಎಂಬುದನ್ನು ತಿಳಿಸಿದರು. ಸಭೆಯಲ್ಲಿ ಮಂಡಲ ಅಧ್ಯಕ್ಷ ರಾಜೇಶ್ ಕೊಠಾರಿ, ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಸುನಿತಾ ಬೆಂಗ್ರೆ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಬಬಿತಾ ರವೀಂದ್ರ , ವಜ್ರಾಕ್ಷಿ, ಜಿಲ್ಲಾ ಮಹಿಳಾ ಮೋರ್ಚಾ , ಪ್ರಧಾನ ಕಾರ್ಯದರ್ಶಿಯಾದ ಲಿಖಿತಾ , ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿಯಾದ ಸುಮಾ ಶೆಟ್ಟಿ , ಮಹಾನಗರ ಪಾಲಿಕೆಯ ಸದಸ್ಯರು, ಪಂಚಾಯಿತಿನ ಸದಸ್ಯರು ಹಾಗೂ ಪಕ್ಷದ ಹಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಡಲ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸ್ವಪ್ನಾ ಕಾರ್ಯಕ್ರಮದ ನಿರೂಪಣೆ ಮಾಡಿದರು. ಮಂಡಲ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಪವಿತ್ರಾ ನಿರಂಜನ್ ಸ್ವಾಗತಿಸಿದರು. ಸವಿತಾ ಅವರು ಧನ್ಯವಾದ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು