3:52 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ನಾಗರ ಪಂಚಮಿ ನಾಡಿಗೆ ದೊಡ್ಡದು: ನಾಡಿನಾದ್ಯಂತ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಸರಳವಾಗಿ ಅಚರಣೆ

13/08/2021, 10:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ರಾಜ್ಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಯ ಭಕ್ತಿಯಿಂದ ಆಚರಿಸಲಾಯಿತು. ಹೆಣ್ಣು ಮಕ್ಕಳ ಹಬ್ಬವೆಂದೇ ಖ್ಯಾತಿ ಪಡೆದ ಪಂಚಮಿ ಹಬ್ಬವನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಉತ್ತರ ಕರ್ನಾಟಕ, ಈಶಾನ್ಯ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ನಾಗಬನ, ದೇಗುಲ, ಗುಡಿ-ಗೋಪುರಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಕೇವಲ ಸಂಪ್ರದಾಯಕ್ಕಾಗಿ ಆಚರಿಸಲಾಯಿತು.

ಮಸ್ಕಿ ತಾಲೂಕು ಸೇರಿದಂತೆ ರಾಯಚೂರು
ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನೆಲೆಸಿತ್ತು. ಇಲ್ಲಿನ ಜನರು ಶ್ರಾವಣ ಮಾಸದ ನಿಮಿತ್ತ ನಾಗರಾಜನ ಪೂಜಿಸುತ್ತಾರೆ. ಒಂದು ವೇಳೆ ಪಂಚಮಿ ದಿನದಲ್ಲಿ ಹಾವುಗಳು ಕಂಡರೆ ಅವುಗಳಿಗೆ ಹಾಲು ಎರೆದು ಬರಮಾಡಿಕೊಳ್ಳುತ್ತಾರೆ.
ಶ್ರಾವಣ ಮಾಸದ ನಾಗರ ಪಂಚಮಿಯನ್ನು ಜನರು
ವಿಶೇಷವಾಗಿ ಅದ್ದೂರಿಯಿಂದ ಆಚರಿಸುತ್ತಾರೆ. ನಾಗಪ್ಪನಿಗೆ ವಿಶೇಷವಾಗಿ ಪೂಜೆ, ಅಲಂಕಾರ, ವಿವಿಧ ರೀತಿಯ ಅಭಿಷೇಕ ನಡೆಯುತ್ತದೆ. ಅಲ್ಲದೆ ನಾಗರ ಪಂಚಮಿ ಇಡಿ ನಾಡಿನಲ್ಲಿ ದೊಡ್ಡಬ್ಬವಾಗಿದೆ. ಹೆಣ್ಣು ಮಕ್ಕಳನ್ನು ಗಂಡನ ಮನೆಯಿಂದ ತವರಮನೆಗೆ ಕರೆದುಕೊಂಡು ಬಂದು ಅವರಿಗೆ ಸಿರಿ ಬಂಗಾರ ಉಡುಗರೇ ಕೊಡುವ ಪದ್ಧತಿ ಇದೆ. 
ಹೆಣ್ಣು ಮಕ್ಕಳು ಜೋಕಾಲಿ ಹಾಡುವುದು ಗೆಳತಿಯರೆಲ್ಲ ಸೇರಿ ಹಬ್ಬ ಮಾಡುವುದು ವಿಶೇಷವಾಗಿ ಉತ್ತರ ಕರ್ನಾಟಕ, ಈಶಾನ್ಯ ಕರ್ನಾಟಕದ ಭಾಗದಲ್ಲಿ ನಾವು ಕಾಣುತ್ತೇವೆ.

ಇತ್ತೀಚಿನ ಸುದ್ದಿ

ಜಾಹೀರಾತು