8:52 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ನಾಗರ ಪಂಚಮಿ ನಾಡಿಗೆ ದೊಡ್ಡದು: ನಾಡಿನಾದ್ಯಂತ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಸರಳವಾಗಿ ಅಚರಣೆ

13/08/2021, 10:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ರಾಜ್ಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಯ ಭಕ್ತಿಯಿಂದ ಆಚರಿಸಲಾಯಿತು. ಹೆಣ್ಣು ಮಕ್ಕಳ ಹಬ್ಬವೆಂದೇ ಖ್ಯಾತಿ ಪಡೆದ ಪಂಚಮಿ ಹಬ್ಬವನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಉತ್ತರ ಕರ್ನಾಟಕ, ಈಶಾನ್ಯ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ನಾಗಬನ, ದೇಗುಲ, ಗುಡಿ-ಗೋಪುರಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಕೇವಲ ಸಂಪ್ರದಾಯಕ್ಕಾಗಿ ಆಚರಿಸಲಾಯಿತು.

ಮಸ್ಕಿ ತಾಲೂಕು ಸೇರಿದಂತೆ ರಾಯಚೂರು
ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನೆಲೆಸಿತ್ತು. ಇಲ್ಲಿನ ಜನರು ಶ್ರಾವಣ ಮಾಸದ ನಿಮಿತ್ತ ನಾಗರಾಜನ ಪೂಜಿಸುತ್ತಾರೆ. ಒಂದು ವೇಳೆ ಪಂಚಮಿ ದಿನದಲ್ಲಿ ಹಾವುಗಳು ಕಂಡರೆ ಅವುಗಳಿಗೆ ಹಾಲು ಎರೆದು ಬರಮಾಡಿಕೊಳ್ಳುತ್ತಾರೆ.
ಶ್ರಾವಣ ಮಾಸದ ನಾಗರ ಪಂಚಮಿಯನ್ನು ಜನರು
ವಿಶೇಷವಾಗಿ ಅದ್ದೂರಿಯಿಂದ ಆಚರಿಸುತ್ತಾರೆ. ನಾಗಪ್ಪನಿಗೆ ವಿಶೇಷವಾಗಿ ಪೂಜೆ, ಅಲಂಕಾರ, ವಿವಿಧ ರೀತಿಯ ಅಭಿಷೇಕ ನಡೆಯುತ್ತದೆ. ಅಲ್ಲದೆ ನಾಗರ ಪಂಚಮಿ ಇಡಿ ನಾಡಿನಲ್ಲಿ ದೊಡ್ಡಬ್ಬವಾಗಿದೆ. ಹೆಣ್ಣು ಮಕ್ಕಳನ್ನು ಗಂಡನ ಮನೆಯಿಂದ ತವರಮನೆಗೆ ಕರೆದುಕೊಂಡು ಬಂದು ಅವರಿಗೆ ಸಿರಿ ಬಂಗಾರ ಉಡುಗರೇ ಕೊಡುವ ಪದ್ಧತಿ ಇದೆ. 
ಹೆಣ್ಣು ಮಕ್ಕಳು ಜೋಕಾಲಿ ಹಾಡುವುದು ಗೆಳತಿಯರೆಲ್ಲ ಸೇರಿ ಹಬ್ಬ ಮಾಡುವುದು ವಿಶೇಷವಾಗಿ ಉತ್ತರ ಕರ್ನಾಟಕ, ಈಶಾನ್ಯ ಕರ್ನಾಟಕದ ಭಾಗದಲ್ಲಿ ನಾವು ಕಾಣುತ್ತೇವೆ.

ಇತ್ತೀಚಿನ ಸುದ್ದಿ

ಜಾಹೀರಾತು