12:15 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಾಗರ ಪಂಚಮಿ ನಾಡಿಗೆ ದೊಡ್ಡದು: ನಾಡಿನಾದ್ಯಂತ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಸರಳವಾಗಿ ಅಚರಣೆ

13/08/2021, 10:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ರಾಜ್ಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಯ ಭಕ್ತಿಯಿಂದ ಆಚರಿಸಲಾಯಿತು. ಹೆಣ್ಣು ಮಕ್ಕಳ ಹಬ್ಬವೆಂದೇ ಖ್ಯಾತಿ ಪಡೆದ ಪಂಚಮಿ ಹಬ್ಬವನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಉತ್ತರ ಕರ್ನಾಟಕ, ಈಶಾನ್ಯ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ನಾಗಬನ, ದೇಗುಲ, ಗುಡಿ-ಗೋಪುರಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಕೇವಲ ಸಂಪ್ರದಾಯಕ್ಕಾಗಿ ಆಚರಿಸಲಾಯಿತು.

ಮಸ್ಕಿ ತಾಲೂಕು ಸೇರಿದಂತೆ ರಾಯಚೂರು
ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನೆಲೆಸಿತ್ತು. ಇಲ್ಲಿನ ಜನರು ಶ್ರಾವಣ ಮಾಸದ ನಿಮಿತ್ತ ನಾಗರಾಜನ ಪೂಜಿಸುತ್ತಾರೆ. ಒಂದು ವೇಳೆ ಪಂಚಮಿ ದಿನದಲ್ಲಿ ಹಾವುಗಳು ಕಂಡರೆ ಅವುಗಳಿಗೆ ಹಾಲು ಎರೆದು ಬರಮಾಡಿಕೊಳ್ಳುತ್ತಾರೆ.
ಶ್ರಾವಣ ಮಾಸದ ನಾಗರ ಪಂಚಮಿಯನ್ನು ಜನರು
ವಿಶೇಷವಾಗಿ ಅದ್ದೂರಿಯಿಂದ ಆಚರಿಸುತ್ತಾರೆ. ನಾಗಪ್ಪನಿಗೆ ವಿಶೇಷವಾಗಿ ಪೂಜೆ, ಅಲಂಕಾರ, ವಿವಿಧ ರೀತಿಯ ಅಭಿಷೇಕ ನಡೆಯುತ್ತದೆ. ಅಲ್ಲದೆ ನಾಗರ ಪಂಚಮಿ ಇಡಿ ನಾಡಿನಲ್ಲಿ ದೊಡ್ಡಬ್ಬವಾಗಿದೆ. ಹೆಣ್ಣು ಮಕ್ಕಳನ್ನು ಗಂಡನ ಮನೆಯಿಂದ ತವರಮನೆಗೆ ಕರೆದುಕೊಂಡು ಬಂದು ಅವರಿಗೆ ಸಿರಿ ಬಂಗಾರ ಉಡುಗರೇ ಕೊಡುವ ಪದ್ಧತಿ ಇದೆ. 
ಹೆಣ್ಣು ಮಕ್ಕಳು ಜೋಕಾಲಿ ಹಾಡುವುದು ಗೆಳತಿಯರೆಲ್ಲ ಸೇರಿ ಹಬ್ಬ ಮಾಡುವುದು ವಿಶೇಷವಾಗಿ ಉತ್ತರ ಕರ್ನಾಟಕ, ಈಶಾನ್ಯ ಕರ್ನಾಟಕದ ಭಾಗದಲ್ಲಿ ನಾವು ಕಾಣುತ್ತೇವೆ.

ಇತ್ತೀಚಿನ ಸುದ್ದಿ

ಜಾಹೀರಾತು