5:56 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ನಾಗರ ಪಂಚಮಿ ನಾಡಿಗೆ ದೊಡ್ಡದು: ನಾಡಿನಾದ್ಯಂತ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಸರಳವಾಗಿ ಅಚರಣೆ

13/08/2021, 10:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ರಾಜ್ಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಯ ಭಕ್ತಿಯಿಂದ ಆಚರಿಸಲಾಯಿತು. ಹೆಣ್ಣು ಮಕ್ಕಳ ಹಬ್ಬವೆಂದೇ ಖ್ಯಾತಿ ಪಡೆದ ಪಂಚಮಿ ಹಬ್ಬವನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಉತ್ತರ ಕರ್ನಾಟಕ, ಈಶಾನ್ಯ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ನಾಗಬನ, ದೇಗುಲ, ಗುಡಿ-ಗೋಪುರಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಕೇವಲ ಸಂಪ್ರದಾಯಕ್ಕಾಗಿ ಆಚರಿಸಲಾಯಿತು.

ಮಸ್ಕಿ ತಾಲೂಕು ಸೇರಿದಂತೆ ರಾಯಚೂರು
ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ನೆಲೆಸಿತ್ತು. ಇಲ್ಲಿನ ಜನರು ಶ್ರಾವಣ ಮಾಸದ ನಿಮಿತ್ತ ನಾಗರಾಜನ ಪೂಜಿಸುತ್ತಾರೆ. ಒಂದು ವೇಳೆ ಪಂಚಮಿ ದಿನದಲ್ಲಿ ಹಾವುಗಳು ಕಂಡರೆ ಅವುಗಳಿಗೆ ಹಾಲು ಎರೆದು ಬರಮಾಡಿಕೊಳ್ಳುತ್ತಾರೆ.
ಶ್ರಾವಣ ಮಾಸದ ನಾಗರ ಪಂಚಮಿಯನ್ನು ಜನರು
ವಿಶೇಷವಾಗಿ ಅದ್ದೂರಿಯಿಂದ ಆಚರಿಸುತ್ತಾರೆ. ನಾಗಪ್ಪನಿಗೆ ವಿಶೇಷವಾಗಿ ಪೂಜೆ, ಅಲಂಕಾರ, ವಿವಿಧ ರೀತಿಯ ಅಭಿಷೇಕ ನಡೆಯುತ್ತದೆ. ಅಲ್ಲದೆ ನಾಗರ ಪಂಚಮಿ ಇಡಿ ನಾಡಿನಲ್ಲಿ ದೊಡ್ಡಬ್ಬವಾಗಿದೆ. ಹೆಣ್ಣು ಮಕ್ಕಳನ್ನು ಗಂಡನ ಮನೆಯಿಂದ ತವರಮನೆಗೆ ಕರೆದುಕೊಂಡು ಬಂದು ಅವರಿಗೆ ಸಿರಿ ಬಂಗಾರ ಉಡುಗರೇ ಕೊಡುವ ಪದ್ಧತಿ ಇದೆ. 
ಹೆಣ್ಣು ಮಕ್ಕಳು ಜೋಕಾಲಿ ಹಾಡುವುದು ಗೆಳತಿಯರೆಲ್ಲ ಸೇರಿ ಹಬ್ಬ ಮಾಡುವುದು ವಿಶೇಷವಾಗಿ ಉತ್ತರ ಕರ್ನಾಟಕ, ಈಶಾನ್ಯ ಕರ್ನಾಟಕದ ಭಾಗದಲ್ಲಿ ನಾವು ಕಾಣುತ್ತೇವೆ.

ಇತ್ತೀಚಿನ ಸುದ್ದಿ

ಜಾಹೀರಾತು