3:44 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮಾರ್ಚ್ 25ರಂದು ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’: 12 ಚರ್ಚುಗಳ ಪಾಲ್ಗೊಳ್ಳುವಿಕೆ

23/03/2024, 17:27

ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ಮಾ. 25 ರಂದು ಸಂಜೆ 4.30 ಗಂಟೆಗೆ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್)ನ್ನು ನಡೆಸಲಾಗುವುದು ಎಂದು ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಫಾ| ಕ್ಲಿಫರ್ಡ್ ಫೆರ್ನಾಂಡಿಸ್ ತಿಳಿಸಿದ್ದಾರೆ.
ಮಂಗಳೂರಿನ ಕುಲಶೇಖರ (ಕಾರ್ಡೆಲ್), ವಾಮಂಜೂರು, ಪಾಲ್ದಾನೆ, ಬೊಂದೇಲ್, ದೇರೇಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳ ಕಲಾವಿದರು ಹಾಗೂ ಪ್ರತಿ ಚರ್ಚಿನಿಂದ ಪ್ರತಿ ನಿಲ್ದಾಣಕ್ಕೆ (ಸ್ಟೇಶನ್) 3 ಜನ ನಿರೂಪಕರು ಈ ಶಿಲುಬೆಯ ಹಾದಿಯನ್ನು ನಡೆಸಲಿರುವರು. ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಯಲಿರುವುದು. 12 ಚರ್ಚುಗಳ ಎಲ್ಲಾ ಭಕ್ತವೃಂದದವರು ಶಿಲುಬೆಯ ಹಾದಿಯಲ್ಲಿ ಭಾಗವಹಿಸಲಿದ್ದು, ಸುಮಾರು 6ರಿಂದ 7 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು