6:25 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಾರ್ಚ್ 25ರಂದು ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’: 12 ಚರ್ಚುಗಳ ಪಾಲ್ಗೊಳ್ಳುವಿಕೆ

23/03/2024, 17:27

ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ಮಾ. 25 ರಂದು ಸಂಜೆ 4.30 ಗಂಟೆಗೆ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್)ನ್ನು ನಡೆಸಲಾಗುವುದು ಎಂದು ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಫಾ| ಕ್ಲಿಫರ್ಡ್ ಫೆರ್ನಾಂಡಿಸ್ ತಿಳಿಸಿದ್ದಾರೆ.
ಮಂಗಳೂರಿನ ಕುಲಶೇಖರ (ಕಾರ್ಡೆಲ್), ವಾಮಂಜೂರು, ಪಾಲ್ದಾನೆ, ಬೊಂದೇಲ್, ದೇರೇಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳ ಕಲಾವಿದರು ಹಾಗೂ ಪ್ರತಿ ಚರ್ಚಿನಿಂದ ಪ್ರತಿ ನಿಲ್ದಾಣಕ್ಕೆ (ಸ್ಟೇಶನ್) 3 ಜನ ನಿರೂಪಕರು ಈ ಶಿಲುಬೆಯ ಹಾದಿಯನ್ನು ನಡೆಸಲಿರುವರು. ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಯಲಿರುವುದು. 12 ಚರ್ಚುಗಳ ಎಲ್ಲಾ ಭಕ್ತವೃಂದದವರು ಶಿಲುಬೆಯ ಹಾದಿಯಲ್ಲಿ ಭಾಗವಹಿಸಲಿದ್ದು, ಸುಮಾರು 6ರಿಂದ 7 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು