9:47 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಮಾರ್ಚ್ 25ರಂದು ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’: 12 ಚರ್ಚುಗಳ ಪಾಲ್ಗೊಳ್ಳುವಿಕೆ

23/03/2024, 17:27

ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ಮಾ. 25 ರಂದು ಸಂಜೆ 4.30 ಗಂಟೆಗೆ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್)ನ್ನು ನಡೆಸಲಾಗುವುದು ಎಂದು ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಫಾ| ಕ್ಲಿಫರ್ಡ್ ಫೆರ್ನಾಂಡಿಸ್ ತಿಳಿಸಿದ್ದಾರೆ.
ಮಂಗಳೂರಿನ ಕುಲಶೇಖರ (ಕಾರ್ಡೆಲ್), ವಾಮಂಜೂರು, ಪಾಲ್ದಾನೆ, ಬೊಂದೇಲ್, ದೇರೇಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳ ಕಲಾವಿದರು ಹಾಗೂ ಪ್ರತಿ ಚರ್ಚಿನಿಂದ ಪ್ರತಿ ನಿಲ್ದಾಣಕ್ಕೆ (ಸ್ಟೇಶನ್) 3 ಜನ ನಿರೂಪಕರು ಈ ಶಿಲುಬೆಯ ಹಾದಿಯನ್ನು ನಡೆಸಲಿರುವರು. ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಯಲಿರುವುದು. 12 ಚರ್ಚುಗಳ ಎಲ್ಲಾ ಭಕ್ತವೃಂದದವರು ಶಿಲುಬೆಯ ಹಾದಿಯಲ್ಲಿ ಭಾಗವಹಿಸಲಿದ್ದು, ಸುಮಾರು 6ರಿಂದ 7 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು