7:18 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಸೈಬರ್ ಅಪರಾಧ: ರಾಜಸ್ಥಾನದಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ; 1.15 ಲಕ್ಷ ರೂ. ವಂಚಿಸಿದ ಆರೋಪಿಯ ಬಂಧನ

24/03/2024, 23:14

ಮಂಗಳೂರು(reporterkarnataka.com): ವಾಟ್ಸ್ ಆಫ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇದೆ ಎಂದು ನಂಬಿಸಿ 1.15 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿ.ಈ.ಎನ್. ಕ್ರೈಂ ಪೊಲೀಸರು ರಾಜಸ್ಥಾನ ನಿವಾಸಿಯೊಬ್ಬನನ್ನು ಬಂಧಿಸಿದ್ದಾರೆ.
ರಾಜಸ್ಥಾನದ ಜೋಧ್ ಪುರ್ ಜಿಲ್ಲೆಯ ಬಾವುರಿ ಗ್ರಾಮದ ನಿವಾಸಿಯಾದ ಸದ್ದಾಂ ಗೌರಿ ಅಲಿಯಾಸ್ ಬಾವುರಿ (30) ಎಂಬಾತನನ್ನು ಬಾವುರಿ ಗ್ರಾಮದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರ ಸಿ.ಈ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಕುರಿತು 131/2023 ಕಲಂ 66(ಸಿ) 66(ಡಿ) ಐಟಿ ಆಕ್ಟ್ 420 ಐಪಿಸಿಯಡಿ ಪ್ರಕರಣ ದಾಖಲಾಗಿತ್ತು.
ಆರೋಪಿಯು ವಾಟ್ಸ್ ಆಫ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಪಿರ್ಯಾದಿದಾರಿಗೆ ಸಂದೇಶ ಕಳುಹಿಸಿ ಪಾರ್ಟ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಪಿರ್ಯಾದಿದಾರರಿಂದ ಒಟ್ಟು 1,15,000 ಹಣ ಪಡೆದು ವಂಚಿಸಿದ್ದ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಎರಡು ಮೊಬೈಲ್ ಫೋನ್ , 8 ಡೆಬಿಟ್ ಕಾರ್ಡ್, 4 ಬ್ಯಾಂಕ್ ಚೆಕ್ ಬುಕ್ ಗಳು, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಹಾಗೂ ಡಿಸಿಪಿ ಸಿದ್ದಾರ್ಥ ಗೊಯಲ್ ಅವರ ಮಾರ್ಗದರ್ಶನದಂತೆ, ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ಅವರ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು