7:03 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸೈಬರ್ ಅಪರಾಧ: ರಾಜಸ್ಥಾನದಲ್ಲಿ ಮಂಗಳೂರು ಪೊಲೀಸರ ಕಾರ್ಯಾಚರಣೆ; 1.15 ಲಕ್ಷ ರೂ. ವಂಚಿಸಿದ ಆರೋಪಿಯ ಬಂಧನ

24/03/2024, 23:14

ಮಂಗಳೂರು(reporterkarnataka.com): ವಾಟ್ಸ್ ಆಫ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇದೆ ಎಂದು ನಂಬಿಸಿ 1.15 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿ.ಈ.ಎನ್. ಕ್ರೈಂ ಪೊಲೀಸರು ರಾಜಸ್ಥಾನ ನಿವಾಸಿಯೊಬ್ಬನನ್ನು ಬಂಧಿಸಿದ್ದಾರೆ.
ರಾಜಸ್ಥಾನದ ಜೋಧ್ ಪುರ್ ಜಿಲ್ಲೆಯ ಬಾವುರಿ ಗ್ರಾಮದ ನಿವಾಸಿಯಾದ ಸದ್ದಾಂ ಗೌರಿ ಅಲಿಯಾಸ್ ಬಾವುರಿ (30) ಎಂಬಾತನನ್ನು ಬಾವುರಿ ಗ್ರಾಮದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರ ಸಿ.ಈ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಕುರಿತು 131/2023 ಕಲಂ 66(ಸಿ) 66(ಡಿ) ಐಟಿ ಆಕ್ಟ್ 420 ಐಪಿಸಿಯಡಿ ಪ್ರಕರಣ ದಾಖಲಾಗಿತ್ತು.
ಆರೋಪಿಯು ವಾಟ್ಸ್ ಆಫ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಪಿರ್ಯಾದಿದಾರಿಗೆ ಸಂದೇಶ ಕಳುಹಿಸಿ ಪಾರ್ಟ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಪಿರ್ಯಾದಿದಾರರಿಂದ ಒಟ್ಟು 1,15,000 ಹಣ ಪಡೆದು ವಂಚಿಸಿದ್ದ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಎರಡು ಮೊಬೈಲ್ ಫೋನ್ , 8 ಡೆಬಿಟ್ ಕಾರ್ಡ್, 4 ಬ್ಯಾಂಕ್ ಚೆಕ್ ಬುಕ್ ಗಳು, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಹಾಗೂ ಡಿಸಿಪಿ ಸಿದ್ದಾರ್ಥ ಗೊಯಲ್ ಅವರ ಮಾರ್ಗದರ್ಶನದಂತೆ, ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ಅವರ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು