8:03 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿಗೆ ಕುಡಿಯುವ ನೀರು ಕೊಡದಷ್ಟು ಸರಕಾರ ಅಸಮರ್ಥವಾಗಿದೆ: ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಆರೋಪ

25/03/2024, 18:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನಲ್ಲಿ ಬರ ತಾಂಡವಾಡುತ್ತಿದ್ದು ಜನರಿಗೆ ಕುಡಿಯಲು ನೀರನ್ನು ಕೊಡದಷ್ಟು ಸರ್ಕಾರ ಅಸಮರ್ಥವಾಗಿದ್ದು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳು ಕುಂಟಿತ ಆಗಿವೆ ಎಂದು ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಆರೋಪಿಸಿದ್ದಾರೆ. ಅವರು ಹೇಳಿಕೆಯಲ್ಲಿ ತಿಳಿಸಿ ಮೋಸ ಕುತಂತ್ರ ಮತ್ತು ಸುಳ್ಳು ಭರವಸೆಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಬಕ್ಕಸವನ್ನು ಬರಿದು ಮಾಡಿ ದಿವಾಳಿ ಅಂಚಿಗೆ ತಂದಿದ್ದು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿವೆ ಪ್ರಮುಖವಾಗಿ ನಮ್ಮ ಜಿಲ್ಲೆಯಲ್ಲಿ ಬರ ತಾಂಡವಾಡುತ್ತಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರನ್ನು ನೀಡುತ್ತಿಲ್ಲ. ಮೇವಿಲ್ಲದೆ ಗೋವುಗಳನ್ನು ಕಟಕರಿಗೆ ಮಾರಲಾಗುತ್ತಿದೆ. ಇದನ್ನು ತಪ್ಪಿಸಲು ಗೋಶಾಲೆಗಳನ್ನು ತೆರೆಯಬೇಕಾಗಿತ್ತು. ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ನೀರನ್ನು ಒದಗಿಸಲು ಕ್ರಿಯೆ ಯೋಜನೆ ರೂಪಿಸಬೇಕಿತ್ತು. ನಿರಂತರ ವಿದ್ಯುತ್ ನೀಡಲು ಕರೆಂಟ್ ಖರೀದಿ ಕಾರ್ಯಗಳನ್ನು ಮಾಡಬೇಕಿತ್ತು. ಬರದಿಂದ ಕಂಗೆಟ್ಟಿರುವ ರೈತರಿಗೆ ಬೆಳೆಗಳಿಗೆ ನೀರು ಹರಿಸಲು ಸರಿಯಾದ ವಿದ್ಯುತ್ ಕೂಡ ನೀಡುತ್ತಿಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಪ್ರಾರಂಭವಾಗಿದ್ದು ರಾತ್ರಿ ಹಗಲೆನ್ನದೆ ವಿದ್ಯುತ್ ಕಡಿತ ಮಾಡಲಾಗುತ್ತದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ.

ಅಧಿಕಾರಿಗಳು ಚುನಾವಣೆ ಹೆಸರಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಬರ ನಿರ್ವಹಣೆಗೆ ಅಧಿಕಾರಿಗಳು ಜನಪ್ರತಿನಿಧಿಗಳ ಟಾಸ್ಕ್ ಪೋರ್ಸ್ ರಚಿಸಿಕೊಳ್ಳಬೇಕಿತ್ತು ಇದ್ಯಾವುದನ್ನು ಮಾಡದೆ ಜನರನ್ನು ಸಂಕಷ್ಟಕ್ಕೆ ನೋಡಿದ್ದಾರೆ ಎಂದು ಹೇಳಿದ್ದಾರೆ.

ಪೋಟೊ ವಿನಯ್ ಹಳೆಕೋಟೆ

ಇತ್ತೀಚಿನ ಸುದ್ದಿ

ಜಾಹೀರಾತು