11:04 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿಗೆ ಕುಡಿಯುವ ನೀರು ಕೊಡದಷ್ಟು ಸರಕಾರ ಅಸಮರ್ಥವಾಗಿದೆ: ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಆರೋಪ

25/03/2024, 18:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನಲ್ಲಿ ಬರ ತಾಂಡವಾಡುತ್ತಿದ್ದು ಜನರಿಗೆ ಕುಡಿಯಲು ನೀರನ್ನು ಕೊಡದಷ್ಟು ಸರ್ಕಾರ ಅಸಮರ್ಥವಾಗಿದ್ದು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳು ಕುಂಟಿತ ಆಗಿವೆ ಎಂದು ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಆರೋಪಿಸಿದ್ದಾರೆ. ಅವರು ಹೇಳಿಕೆಯಲ್ಲಿ ತಿಳಿಸಿ ಮೋಸ ಕುತಂತ್ರ ಮತ್ತು ಸುಳ್ಳು ಭರವಸೆಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಬಕ್ಕಸವನ್ನು ಬರಿದು ಮಾಡಿ ದಿವಾಳಿ ಅಂಚಿಗೆ ತಂದಿದ್ದು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿವೆ ಪ್ರಮುಖವಾಗಿ ನಮ್ಮ ಜಿಲ್ಲೆಯಲ್ಲಿ ಬರ ತಾಂಡವಾಡುತ್ತಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರನ್ನು ನೀಡುತ್ತಿಲ್ಲ. ಮೇವಿಲ್ಲದೆ ಗೋವುಗಳನ್ನು ಕಟಕರಿಗೆ ಮಾರಲಾಗುತ್ತಿದೆ. ಇದನ್ನು ತಪ್ಪಿಸಲು ಗೋಶಾಲೆಗಳನ್ನು ತೆರೆಯಬೇಕಾಗಿತ್ತು. ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ನೀರನ್ನು ಒದಗಿಸಲು ಕ್ರಿಯೆ ಯೋಜನೆ ರೂಪಿಸಬೇಕಿತ್ತು. ನಿರಂತರ ವಿದ್ಯುತ್ ನೀಡಲು ಕರೆಂಟ್ ಖರೀದಿ ಕಾರ್ಯಗಳನ್ನು ಮಾಡಬೇಕಿತ್ತು. ಬರದಿಂದ ಕಂಗೆಟ್ಟಿರುವ ರೈತರಿಗೆ ಬೆಳೆಗಳಿಗೆ ನೀರು ಹರಿಸಲು ಸರಿಯಾದ ವಿದ್ಯುತ್ ಕೂಡ ನೀಡುತ್ತಿಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಪ್ರಾರಂಭವಾಗಿದ್ದು ರಾತ್ರಿ ಹಗಲೆನ್ನದೆ ವಿದ್ಯುತ್ ಕಡಿತ ಮಾಡಲಾಗುತ್ತದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ.

ಅಧಿಕಾರಿಗಳು ಚುನಾವಣೆ ಹೆಸರಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಬರ ನಿರ್ವಹಣೆಗೆ ಅಧಿಕಾರಿಗಳು ಜನಪ್ರತಿನಿಧಿಗಳ ಟಾಸ್ಕ್ ಪೋರ್ಸ್ ರಚಿಸಿಕೊಳ್ಳಬೇಕಿತ್ತು ಇದ್ಯಾವುದನ್ನು ಮಾಡದೆ ಜನರನ್ನು ಸಂಕಷ್ಟಕ್ಕೆ ನೋಡಿದ್ದಾರೆ ಎಂದು ಹೇಳಿದ್ದಾರೆ.

ಪೋಟೊ ವಿನಯ್ ಹಳೆಕೋಟೆ

ಇತ್ತೀಚಿನ ಸುದ್ದಿ

ಜಾಹೀರಾತು